ಚಿಕ್ಕಮಗಳೂರು ಜಿಲ್ಲಾ ಜನಜಾಗೃತಿ ವೇದಿಕೆ ಸಭೆ

Janajagurthi Vedike News

ಚಿತ್ರದುರ್ಗ ಪ್ರಾದೇಶಿಕ ವಿಭಾಗದ ಚಿಕ್ಕಮಗಳೂರು ಜಿಲ್ಲಾ ಜನಜಾಗೃತಿ ವೇದಿಕೆ ಸಭೆ ಅಧ್ಯಕ್ಷರಾದ ಶ್ರೀ ಎ. ಸಿ. ಚಂದ್ರಪ್ಪ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ 2024-25 ನೇ ಸಾಲಿನಲ್ಲಿ ಅನುಷ್ಠಾನ ಮಾಡಿದ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಯಿತು. 2025-26 ನೇ ಸಾಲಿನ ಕ್ರಿಯಾ ಯೋಜನೆಯಲ್ಲಿ ನಡೆಸಬೇಕಾದ ಮದ್ಯವರ್ಜನ ಶಿಬಿರ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ, ತಂಬಾಕು ವಿರೋಧಿ ದಿನಾಚರಣೆ, ಮಾದಕ ವಸ್ತು ವಿರೋಧಿ ದಿನಾಚರಣೆ, ಸ್ವಾಸ್ಥ್ಯ ಸಂಕಲ್ಪ ತರಬೇತುದಾರರ ತರಬೇತಿ, ನವಜೀವನ ಪೋಷಕರ ತರಬೇತಿ, ನವಜೀವನ ಸಮಿತಿ ಬಲವರ್ಧನೆಗೆ ಪೋಷಕರ ಪಾತ್ರ, ಇತ್ತೀಚಿಗಿನ ದಿನದಲ್ಲಿ ಕ್ಷೇತ್ರದ ಬಗ್ಗೆ ನಡೆಯುವ ವಿದ್ಯಮಾನದ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿ ಸಮಗ್ರ ನಿರ್ಣಯ ಕೈಗೊಳ್ಳಲಾಯಿತು. ಸಭೆಯಲ್ಲಿ ಜಿಲ್ಲಾ ನಿರ್ದೇಶಕರು ವರದಿ ಮಂಡಿಸಿದರು. ಈ ಸಂದರ್ಭದಲ್ಲಿ ಸ್ಥಾಪಕದ್ಯಕ್ಷರು, ಉಪಾಧ್ಯಕ್ಷರು ಮತ್ತು ಜಿಲ್ಲಾ ವೇದಿಕೆ ಸದಸ್ಯರು ಉಪಸ್ಥಿತರಿದ್ದರು.