ತುಮಕೂರು 2 ಜಿಲ್ಲಾ ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಭೆ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ತುಮಕೂರು-2 ಜಿಲ್ಲೆ ಮತ್ತು ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ತುಮಕೂರು-2 ಜಿಲ್ಲೆ ಸಹಯೋಗದೊಂದಿಗೆ ರಾಜರ್ಷಿ ಪದ್ಮಭೂಷಣ ಡಾ|| ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾ|| ಹೇಮಾವತಿ ವಿ. ಹೆಗ್ಗಡೆಯವರ ಕೃಪಾಷೀರ್ವಾದ ಹಾಗೂ ಮಾರ್ಗದರ್ಶನಗಳೊಂದಿಗೆ ತುಮಕೂರು-2 ಜಿಲ್ಲಾ ಜನಜಾಗೃತಿ ವೇದಿಕೆ ಪದಾದಿಕಾರಿಗಳ ಸಭೆ ಶಿರಾ-1 ಯೋಜನಾ ಕಛೇರಿ ಸಭಾಂಗಣದಲ್ಲಿ ನಡೆಯಿತು. ವೇದಿಕೆಯಲ್ಲಿ ಆಸೀನರಾಗಿದ್ದ ಗಣ್ಯರು ದೀಪವನ್ನು ಪ್ರಜ್ವಲಿಸುವ ಮೂಲಕ ಸಭೆಯನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನು ತುಮಕೂರು-2 ಜಿಲ್ಲಾ ಜನಜಾಗೃತಿ ವೇದಿಕೆ ಜಿಲ್ಲಾ ಕಾರ್ಯದರ್ಶಿಗಳು ಹಾಗೂ ತುಮಕೂರು-2 ಜಿಲ್ಲೆಯ ಮಾನ್ಯ ಜಿಲ್ಲಾ ನಿರ್ದೇಶಕರಾದ ಶ್ರೀ ದಿನೇಶ್ ಡಿ. ರವರು ತುಮಕೂರು-2 ಜಿಲ್ಲಾ ಕಛೇರಿ ವ್ಯಾಪ್ತಿಯಲ್ಲಿ ಇದುವರೆಗೂ ನಡೆದ ಜನಜಾಗೃತಿ ವೇದಿಕೆ ಕಾರ್ಯಕ್ರಮಗಳ ಅಂಕಿ ಅಂಶಗಳನ್ನು ಸದ್ರಿ ಸಭೆಯಲ್ಲಿ ಮಂಡಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಪೂಜ್ಯರು ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಿಗೆ ನೀಡುತ್ತಿರುವಂತಹ ಆರ್ಥಿಕ ಸಹಾಯದ ಅಂಕಿ ಅಂಶಗಳ ವರದಿಯನ್ನು ಗತ ಸಭೆಯಲ್ಲಿ ಮಂಡಿಸಿ, ತುಮಕೂರು-2 ಜಿಲ್ಲಾ ಕಛೇರಿ ವ್ಯಾಪ್ತಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೂಲಕ ಇದುವರೆಗೂ ನಡೆಸಿದ ಕಾರ್ಯಕ್ರಮಗಳ ಅಂಕಿ ಅಂಶಗಳನ್ನು ತಿಳಿಸಿದರು. ತುಮಕೂರು-2 ಜಿಲ್ಲಾ ಜನಜಾಗೃತಿ ವೇದಕೆ ಬ್ಯಾಂಕ್ ಖಾತೆಯ ವಾರ್ಷಿಕ ಖರ್ಚು ವೆಚ್ಚ, ಉಳಿತಾಯದ ಲೆಕ್ಕಾಚಾರವನ್ನು ಸಭೆಯಲ್ಲಿ ಮಂಡಿಸುವ ಮೂಲಕ ಮುಂದಿನ ಆರ್ಥಿಕ ವರದಿ ವರ್ಷದಲ್ಲಿ ಎಲ್ಲಾ ತಾಲೂಕುಗಳಲ್ಲಿ ಜನಜಾಗೃತಿ ವೇದಿಕೆಯ ಪದಾದಿಕಾರಿಗಳ ಸಹಕಾರವನ್ನು ಪಡೆದು ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳನ್ನು ಬಹಳಷ್ಟು ಪರಿಣಾಮಕಾರಿಯಾಗಿ ಅನುಷ್ಠಾನವನ್ನು ಮಾಡುವುದಾಗಿ ತಿಳಿಸುವ ಮೂಲಕ ಪೂಜ್ಯರ ಆಶಯದಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮತ್ತು ಜನಜಾಗೃತಿ ವೇದಿಕೆಗಳು ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿದ್ದು ಕಾರ್ಯಕ್ರಮಗಳ ಅನುಷ್ಠಾನಕ್ಕೆ ತಮ್ಮೆಲ್ಲರ ಸಹಕಾರವನ್ನು ನೀಡಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಬೆಂಗಳೂರು ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆ ಯೋಜನಾಧಿಕಾರಿ ಶ್ರೀ ತಿಮ್ಮಯ್ಯ ನಾಯ್ಕ ರವರು 2024-25 ನೇ ಸಾಲಿನ ವರದಿ ವರ್ಷದ ಕಾರ್ಯಕ್ರಮಗಳ ಅನುಷ್ಠಾನ ಮತ್ತು ಬಾಕಿ ಉಳಿದ ಕಾರ್ಯಕ್ರಮಗಳ ಕುರಿತು, ಮುಂದಿನ ವರ್ಷದ ಕ್ರಿಯಾ ಯೋಜನೆಯ ಕಾರ್ಯಕ್ರಮಗಳು, ಯೋಜನೆಯ ಇತರ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಕುರಿತು, ವಲಯಕ್ಕೊಂದು ನವಜೀವನ ಸಮಿತಿಗಳ ರಚನೆ ಮತ್ತು ಅನುಪಾಲನೆ, ಜನಜಾಗೃತಿ ಸದಸ್ಯರ ಸಂಪೂರ್ಣ ಸುರಕ್ಷಾ ಬಗ್ಗೆ ತಿಳಿಸಿ, ಜನಜಾಗೃತಿ ಸದಸ್ಯರ ಅಂತಿಮ ಪಟ್ಟಿಯನ್ನು ಸಬೆಯಲ್ಲಿ ತಿಳಿಸಿ ದೃಢಪಡಿಸಲಾಯಿತು. ಮುಂದಿನ ದಿನಗಳಲ್ಲಿ ಜನಜಾಗೃತಿ ವೇದಿಕೆಯ ಎಲ್ಲಾ ಕಾರ್ಯಕ್ರಮಗಳನ್ನು ಏಪ್ರಿಲ್ ತಿಂಗಳಿನಿಂದಲೇ ನಡೆಸುವ ಬಗ್ಗೆ ಹಾಗೂ ಕೇಂದ್ರ ಕಛೇರಿಯಿಂದ ನೀಡಿರುವ 2025-26 ನೇ ಆರ್ಥಿಕ ವರ್ಷದ ಜನಜಾಗೃತಿ ವೇದಿಕೆ ಕಾರ್ಯಕ್ರಮಗಳ ಗುರಿಯನ್ನು ತಿಳಿಸಿ ಮಾಹಿತಿಯನ್ನು ನೀಡಿದರು. ತುಮಕೂರು -2 ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರುಗಳು ಹಲವಾರು ವಿಷಯಗಳ ಬಗ್ಗೆ ಚರ್ಚೇಯನ್ನು ನಡೆಸುವ ಮೂಲಕ ಆರೋಗ್ಯಕರ ಚರ್ಚೆಯಲ್ಲಿ ಭಾಗವಹಿಸಿ ಸಲಹೆಗಳನ್ನು ನೀಡಿದರು. ಸಭೆಯ ಅಧ್ಯಕ್ಷತೆಯನ್ನು ತುಮಕೂರು-2 ಜಿಲ್ಲೆಯ ಜಿಲ್ಲಾ ಜನಜಾಗೃತಿ ವೇದಿಕೆ ಹಿರಿಯ ಸದಸ್ಯರಾದ ಶ್ರೀ ನಾಗರಾಜ್ ರವರು ವಹಿಸಿ ಅಧ್ಯಕ್ಷೀಯ ನುಡಿಗಳನ್ನು ನುಡಿದರು. ಸಭೆಯಲ್ಲಿ ತುಮಕೂರು 2 ಜಿಲ್ಲಾ ವ್ಯಾಪ್ತಿಯ ಎಲ್ಲಾ ತಾಲೂಕುಗಳ ಯೋಜನಾಧಿಕಾರಿಗಳು, ಬೆಂಗಳೂರು ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆ ಮೇಲ್ವಿಚಾರಕ ಶ್ರೀ ಎಂ. ಎಸ್. ದರ್ಶನ್, ತುಮಕೂರು -2 ಜಿಲ್ಲಾ ಕಛೇರಿಯ ಆಡಿಟ್ ಪ್ರಬಂಧಕರಾದ ಶ್ರೀ ಚಂದ್ರಶೇಖರ್ ಮತ್ತು ತುಮಕೂರು-2 ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರುಗಳು ಉಪಸ್ಥಿತರಿದ್ದರು.