ಬಾಗಲಕೋಟೆ ಜಿಲ್ಲಾ ಜನಜಾಗೃತಿ ವೇದಿಕೆ ಸಭೆ

Janajagurthi Vedike News

ಕೊಪ್ಪಳ ಪ್ರಾದೇಶಿಕ ವಿಭಾಗದ ಬಾಗಲಕೋಟೆ ಜಿಲ್ಲಾ ಜನಜಾಗೃತಿ ವೇದಿಕೆ ಸಭೆ ರಾಜ್ಯ ಸಂಘಟನಾ ಅಧ್ಯಕ್ಷರಾದ ಶ್ರೀ ನಟರಾಜ್ ಬಾದಾಮಿ, ಪ್ರಾದೇಶಿಕ ನಿರ್ದೇಶಕರಾದ ಶ್ರೀ ಜೆ. ಚಂದ್ರಶೇಖರ್, ಜಿಲ್ಲಾಧ್ಯಕ್ಷರಾದ ಶ್ರೀ ಶ್ರೀಕಾಂತ್ ಸಂದಿಮನಿ ಮತ್ತು ಕಾರ್ಯದರ್ಶಿ ಶ್ರೀ ಚನ್ನಕೇಶವ್ ರವರ ಉಪಸ್ಥಿತಿಯಲ್ಲಿ ನಡೆಯಿತು. ಸಭೆಯಲ್ಲಿ 2024-25 ನೇ ಆರ್ಥಿಕ ವರ್ಷದ ಸಾಧನೆಯ ವಿಮರ್ಶೆ, ಸಮಗ್ರ ಕಾರ್ಯಕ್ರಮದ ಅನುಷ್ಠಾನದ ತಾಲೂಕುವಾರು ವರದಿ ಮಂಡನೆ, ನವಜೀವನ ಪೋಷಕರ ಸಭೆ ಮತ್ತು ನವಜೀವನ ಸಮಿತಿಯ ಪ್ರಗತಿಯ ಅವಲೋಕನ, ಜಿಲ್ಲಾ ಜನಜಾಗೃತಿ ವೇದಿಕೆ ಪದಾಧಿಕಾರಿಗಳು ಮತ್ತು ಕೋ ಅಫ್ಟ್ ಸದಸ್ಯರು, ನವಜೀವನೋತ್ಸವ ಕಾರ್ಯಕ್ರಮ, ಜಿಲ್ಲಾ ಜನಜಾಗೃತಿ ವೇದಿಕೆಯ ಲೆಕ್ಕಾಚಾರ ಹಾಗೂ ಆಂತರಿಕ ಲೆಕ್ಕ ಪರಿಶೋಧನೆ, 2025-26 ನೇ ಆರ್ಥಿಕ ವರ್ಷದ ಮದ್ಯವರ್ಜನ ಶಿಬಿರದ ಅನುಷ್ಠಾನ, ಜಿಲ್ಲಾ ಜನಜಾಗೃತಿ ಪದಾಧಿಕಾರಿಗಳ ಕೆ ವೈ ಸಿ ದಾಖಲೀಕರಣ, ಸಂಪೂರ್ಣ ಸುರಕ್ಷಾ ಮತ್ತು ಆರೋಗ್ಯ ರಕ್ಷಾ ನೋಂದಾವಣೆ ಇತ್ಯಾದಿ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು, ಕ್ಷೇತ್ರ ಯೋಜನಾಧಿಕಾರಿಗಳು ಮತ್ತು ಜನಜಾಗೃತಿ ವಿಭಾಗದ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.