ಬಾಗಲಕೋಟೆ ತಾಲೂಕಿನಲ್ಲಿ ನಡೆದ 1810ನೇ ಮಧ್ಯವರ್ಜನ ಶಿಬಿರದ ಸಮರೋಪ ಸಮಾರಂಭ ಕಾರ್ಯಕ್ರಮ

Janajagurthi Vedike News

ಕೊಪ್ಪಳ ಪ್ರಾದೇಶಿಕ ವಿಭಾಗದ ಬಾಗಲಕೋಟೆ ತಾಲೂಕಿನ ಅನವಾಲ ಗ್ರಾಮದ ಶ್ರೀ ಶ್ರದ್ದಾನಂದಸ್ವಾಮೀಜಿ ಮಠದಲ್ಲಿ ನಡೆದ 1810 ನೇ ಮಧ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು. ಬಾಗಲಕೋಟೆ ಜಿಲ್ಲೆಯ ಗೌರವಾನ್ವಿತ ಜಿಲ್ಲಾ ನಿರ್ದೇಶಕರಾದ ಶ್ರೀ ಚನ್ನಕೇಶವ ರವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮದ್ಯವರ್ಜನ ಶಿಬಿರದಿಂದ ಸಮಾಜಕ್ಕೆ ಆಗುತ್ತಿರುವ ಅನುಕೂಲಗಳ ಬಗ್ಗೆ ಹಾಗೂ ಶಿಬಿರಾರ್ಥಿಗಳಿಗೆ ಹಾಗೂ ಅವರ ಕುಟುಂಬಕ್ಕೆ ಮಾಹಿತಿ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದಲ್ಲಿ ಬಾಗಲಕೋಟೆ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರು, ಕೊಪ್ಪಳ ಪ್ರಾದೇಶಿಕ ವ್ಯಾಪ್ತಿಯ ಮಾನ್ಯ ಜನಜಾಗೃತಿ ಯೋಜನಾಧಿಕಾರಿಗಳಾದ ಶ್ರೀ ನಾಗೇಶ್, ಬಾಗಲಕೋಟೆ ತಾಲೂಕಿನ ಮಾನ್ಯ ಯೋಜನಾಧಿಕಾರಿಗಳಾದ
ಶ್ರೀ ಬಸವರಾಜ್ ಅಂಗಡಿ, ಶಿಬಿರಾಧಿಕಾರಿ ದೇವಿ ಪ್ರಸಾದ್, ಆರೋಗ್ಯ ಸಹಾಯಕಿ ನೇತ್ರಾವತಿ, ಕೊಪ್ಪಳ ಪ್ರಾದೇಶಿಕ ವಿಭಾಗದ ಜನಜಾಗೃತಿ ಮೇಲ್ವಿಚಾರಕರು, ವಲಯದ ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದರು.