ಬೀದರ್ ಜಿಲ್ಲಾ ಜನಜಾಗೃತಿ ವೇದಿಕೆ ಸಭೆ

Janajagurthi Vedike News

ಕಲಬುರಗಿ ಪ್ರಾದೇಶಿಕ ವಿಭಾಗದ ಬೀದರ್ ಜಿಲ್ಲಾ ಜನಜಾಗೃತಿ ವೇದಿಕೆ ಸಭೆ ಮಾನ್ಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ಜಯಂತ್ ಪೂಜಾರಿ, ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಶ್ರೀ ವಿರೂಪಾಕ್ಷ ಗಾದಿಗ, ನಿರ್ದೇಶಕರಾದ ಶ್ರೀ ಪ್ರವೀಣ್ ಕುಮಾರ್ ಉಪಸ್ಥಿತಿಯಲ್ಲಿ ನಡೆಯಿತು. ಸಭೆಯಲ್ಲಿ 2023-24 ನೇ ಆರ್ಥಿಕ ವರ್ಷದ ಸಾಧನೆಯ ವಿಮರ್ಶೆ, 2024-25 ನೇ ವರದಿ ವರ್ಷದ ಜನಜಾಗೃತಿ ಕಾರ್ಯಕ್ರಮಗಳ ಕ್ರಿಯಾಯೋಜನೆಯ ತಾಲೂಕುವಾರು ಹಂಚಿಕೆಯ ವಿಮರ್ಶೆ, 2024-25 ರ ಮೊದಲ ತ್ರೈಮಾಸಿಕ ಅವಧಿಯ ಮದ್ಯವರ್ಜನ ಶಿಬಿರ, ತಂಬಾಕು ಮತ್ತು ಮಾದಕ ವಸ್ತು ವಿರೋಧಿ ದಿನಾಚರಣೆ, ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ, ನವಜೀವನೋತ್ಸವ ಕಾರ್ಯಕ್ರಮ, ಆರೋಗ್ಯ ರಕ್ಷಾ ಕಾರ್ಯಕ್ರಮ, ನವಜೀವನ ಪೋಷಕರ ತರಬೇತಿ, ಸ್ವಾಸ್ಥ್ಯ ಸಂಕಲ್ಪ ತರಬೇತಿದಾರರ ತರಬೇತಿ, ಸಾಮಾಜಿಕ ಅರಣ್ಯೀಕರಣ, ಗಿಡನಾಟಿ ಕಾರ್ಯಕ್ರಮ ಇತ್ಯಾದಿ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು ಹಾಗೂ ಕ್ಷೇತ್ರ ಯೋಜನಾಧಿಕಾರಿಗಳು, ಜನಜಾಗೃತಿ ವಿಭಾಗದ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.