ಬೆಂಗಳೂರು ಗ್ರಾಮಾಂತರ ಜಿಲ್ಲಾ ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಭೆ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಂಗಳೂರು ಗ್ರಾಮಾಂತರ ಜಿಲ್ಲೆ ಸಹಯೋಗದೊಂದಿಗೆ ರಾಜರ್ಷಿ ಪದ್ಮಭೂಷಣ ಡಾ|| ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾ|| ಹೇಮಾವತಿ ವಿ. ಹೆಗ್ಗಡೆಯವರ ಕೃಪಾಷೀರ್ವಾದ ಹಾಗೂ ಮಾರ್ಗದರ್ಶನಗಳೊಂದಿಗೆ ಬೆಂಗಳೂರು ಗ್ರಾಮಾಂತರ/ನಗರ ಜಿಲ್ಲಾ ಜನಜಾಗೃತಿ ವೇದಿಕೆ ಪದಾದಿಕಾರಿಗಳ ಸಭೆ ಹಿತಚಿಂತನ ಪಬ್ಲಿಕ್ ಸ್ಕೂಲ್ ಸಭಾಂಗಣದಲ್ಲಿ ನಡೆಯಿತು. ವೇದಿಕೆಯಲ್ಲಿ ಆಸೀನರಾಗಿದ್ದ ಗಣ್ಯರು ದೀಪವನ್ನು ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗತಸಭೆಯ ವರದಿಯನ್ನು ದೊಡ್ಡಬಳ್ಳಾಪುರ ಯೋಜನಾ ಕಛೇರಿ ಯೋಜನಾಧಿಕಾರಿ ಶ್ರೀಮತಿ ಸುಧಾ ಭಾಸ್ಕರ್ ರವರು ಮಂಡಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಯೋಜನಾ ಕಛೇರಿಗಳ ಯೋಜನಾಧಿಕಾರಿಗಳು ತಮ್ಮ ತಾಲೂಕುಗಳ ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳ ಅನಷ್ಟಾನಗಳ ವರದಿಯನ್ನು ಮಂಡಿಸಿದರು. ಕಾರ್ಯಕ್ರಮದಲ್ಲಿ ಬೆಂಗಳೂರು ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆ ಯೋಜನಾಧಿಕಾರಿ ಶ್ರೀ ತಿಮ್ಮಯ್ಯ ನಾಯ್ಕ ರವರು 2024-25 ನೇ ಸಾಲಿನ ವರದಿ ವರ್ಷದ ಕಾರ್ಯಕ್ರಮಗಳ ಅನುಷ್ಠಾನ ಮತ್ತು ಬಾಕಿ ಉಳಿದ ಕಾರ್ಯಕ್ರಮಗಳು, ಮುಂದಿನ ವರ್ಷದ ಕ್ರಿಯಾ ಯೋಜನೆ, ಯೋಜನೆಯ ಇತರ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಕುರಿತು, ವಲಯಕ್ಕೊಂದು ನವಜೀವನ ಸಮಿತಿಗಳ ರಚನೆ ಮತ್ತು ಅನುಪಾಲನೆ, ಜನಜಾಗೃತಿ ಸದಸ್ಯರ ಸಂಪೂರ್ಣ ಸುರಕ್ಷಾ, ಮುಂದಿನ ದಿನಗಳಲ್ಲಿ ಜನಜಾಗೃತಿ ವೇದಿಕೆಯ ಎಲ್ಲಾ ಕಾರ್ಯಕ್ರಮಗಳನ್ನು ಏಪ್ರಿಲ್ ತಿಂಗಳಿನಿಂದಲೇ ನಡೆಸುವ ಬಗ್ಗೆ ತಿಳಿಸಿ ಮಾಹಿತಿಯನ್ನು ನೀಡಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಗೌರವಾನ್ವಿತ ಟ್ರಸ್ಟಿಗಳು ಹಾಗೂ ನಿಕಟಪೂರ್ವ ರಾಜ್ಯ ಸಂಘಟನಾ ಅಧ್ಯಕ್ಷರಾದ ಶ್ರೀ ವಿ. ರಾಮಸ್ವಾಮಿ ರವರು ಮಾತನಾಡಿ ಪೂಜ್ಯರ ಪ್ರೀತಿಯ ಕಾರ್ಯಕ್ರಮವಾದ ಜನಜಾಗೃತಿ ಕಾರ್ಯಕ್ರಮದಲ್ಲಿ ಸೇವೆಯನ್ನು ಸಲ್ಲಿಸುತ್ತಿರುವುದು ನಾವುಗಳು ಸಂತೋಷವನ್ನು ಪಡುವಂತಹ ವಿಷಯವಾಗಿದೆ ಎಂದು ತಿಳಿಸಿದರು. ಪೂಜ್ಯರ ವಿರುದ್ದ ಯಾರೇ ಮಾತನಾಡಿದರು ನಾವುಗಳು ಸುಮ್ಮನೆ ಕೂರದೆ ಪೂಜ್ಯರ ಪರವಾಗಿ ಧ್ವನಿಯಾಗಿ ನಿಲ್ಲುವಂತಹ ವ್ಯಕ್ತಿಗಳಾಗಬೇಕೆಂದು ತಿಳಿಸಿದರು. “ಪೂಜ್ಯರಿಗೆ ನಮ್ಮ ಅವಶ್ಯಕತೆ ಇಲ್ಲ ನಮಗೆ ಪೂಜ್ಯರ ಅವಶ್ಯಕತೆ ಇದೆ” ಎಂದು ಉಚ್ಚರಿಸುವ ಮೂಲಕ ಸರಕಾರ ಮಾಡದಂತಹ ಕೆಲಸಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೂಲಕ ಪೂಜ್ಯರು ಮಾಡುತ್ತಿದ್ದು ಈ ವಿಚಾರಗಳನ್ನು ನಾವು ಸಮಾಜಕ್ಕೆ ತಿಳಿಸುವಂತಹ ಕೆಲಸವನ್ನು ಮಾಡಬೇಕೆಂದು ತಿಳಿಸಿ ಯೋಜನೆಯ ಎಲ್ಲಾ ಕಾರ್ಯಕ್ರಮಗಳಿಗೆ ಜನಜಾಗೃತಿ ವೇದಿಕೆಯ ಪದಾದಿಕಾರಿಗಳನ್ನು ಆಹ್ವಾನಿಸುವಂತೆ ಯೋಜನಾಧಿಕಾರಿಗಳಿಗೆ ತಿಳಿಸಿ ಮಾಹಿತಿಯನ್ನು ನೀಡಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾ ಜನಜಾಗೃತಿ ವೇದಿಕೆ ಜಿಲ್ಲಾ ಕಾರ್ಯದರ್ಶಿಗಳು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾನ್ಯ ಜಿಲ್ಲಾ ನಿರ್ದೇಶಕರಾದ ಶ್ರೀ ಉಮರಬ್ಬ ರವರು ಮುಂದಿನ ಆರ್ಥಿಕ ವರದಿ ವರ್ಷದಲ್ಲಿ ಎಲ್ಲಾ ತಾಲೂಕುಗಳಲ್ಲಿ ಜನಜಾಗೃತಿ ವೇದಿಕೆಯ ಪದಾದಿಕಾರಿಗಳ ಸಹಕಾರವನ್ನು ಪಡೆದು ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳನ್ನು ಬಹಳಷ್ಟು ಪರಿಣಾಮಕಾರಿಯಾಗಿ ಅನುಷ್ಠಾನವನ್ನು ಮಾಡುವುದಾಗಿ ತಿಳಿಸಿ ಮಾಹಿತಿಯನ್ನು ನೀಡಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ನರಸಿಂಹರಾಜು ಮತ್ತು ವೇದಿಕೆಯ ಸದಸ್ಯರುಗಳು ಹಲವಾರು ವಿಷಯಗಳ ಬಗ್ಗೆ ಚರ್ಚೆಯನ್ನು ನಡೆಸುವ ಮೂಲಕ ಆರೋಗ್ಯಕರ ಚರ್ಚೆಯಲ್ಲಿ ಭಾಗವಹಿಸಿ ಸಲಹೆಗಳನ್ನು ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯ ಸಂಘಟನಾ ಅಧ್ಯಕ್ಷರಾದ ಶ್ರೀ ನಟರಾಜ್ ಬಾದಾಮಿ ರವರು ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಾರ್ಯಕರ್ತರುಗಳೊಂದಿಗೆ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು ಎಲ್ಲಾ ಸಂಧರ್ಭಗಳಲ್ಲಿಯೂ ಸಹ ಜೊತೆಯಾಗಿ ನಿಲ್ಲುವ ಮೂಲಕ ಸ್ಥಳೀಯ ಸಮಸ್ಯೆಗಳ ನಿವಾರಣೆಯನ್ನು ಮಾಡುವಂತಹ ವ್ಯಕ್ತಿಗಳಾಗಿ ನಾವು ಪೂಜ್ಯರ ಕಾರ್ಯಕ್ರಮಗಳನ್ನು ಸ್ಥಳಿಯ ಮಟ್ಟದಲ್ಲಿ ಅನುಷ್ಟಾನವನ್ನು ಮಾಡಬೇಕೆಂದು ತಿಳಿಸಿದರು. ರಾಜ್ಯ ಸಂಘಟನಾ ಅಧ್ಯಕ್ಷರಾದ ನಂತರದಲ್ಲಿ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜಿಲ್ಲಾ ವೇದಿಕೆ ಸಭೆಯಲ್ಲಿ ಭಾಗವಹಿಸುತ್ತಿರುವುದು ಖುಷಿಯ ಸಂಗತಿಯಾಗಿದ್ದು ಪೂಜ್ಯರ ಮತ್ತು ಮಾತೃರ್ಷಿ ಅಮ್ಮನವರ ಆಶೀರ್ವಾದದಿಂದ ಮತ್ತು ಟ್ರಸ್ಟಿಗಳ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಜನಜಾಗೃತಿ ವೇದಿಕೆಯನ್ನು ಸಂಘಟಿಸುವಂತಹ ಪ್ರಾಮಾಣಿಕ ಪ್ರಯತ್ನವನ್ನು ಮಾಡುವುದಾಗಿ ತಿಳಿಸಿ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷರಾದ ಶ್ರೀಮತಿ ವೀಣಾ ರಮೇಶ್ ರವರು ವಹಿಸಿ ಅಧ್ಯಕ್ಷೀಯ ನುಡಿಗಳನ್ನು ನುಡಿದರು. ಕಾರ್ಯಕ್ರಮದಲ್ಲಿ ಎಂ.ಐ.ಎಸ್ ಯೋಜನಾಧಿಕಾರಿ ಶ್ರೀ ರಿತೇಶ್, ನೆಲಮಂಗಲ ಯೋಜನಾಧಿಕಾರಿ ಶ್ರೀಮತಿ ಸುಜಾತ, ಯಲಹಂಕ ಯೋಜನಾಧಿಕಾರಿ ಶ್ರೀಮತಿ ಸವಿತಾ ಶೆಟ್ಟಿ, ಕೆ.ಆರ್ ಪುರಂ ಯೋಜನಾಧಿಕಾರಿ ಶ್ರೀ ಪುರುಷೋತ್ತಮ್, ಹೊಸಕೋಟೆ ಯೋಜನಾಧಿಕಾರಿ ಶ್ರೀ ಹರೀಶ್, ಆನೇಕಲ್ ಯೋಜನಾಧಿಕಾರಿ ಶ್ರೀ ನಾಗೇಶ್, ಬೆಂಗಳೂರು ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆ ಮೇಲ್ವಿಚಾರಕ ಶ್ರೀ ಎಂ. ಎಸ್. ದರ್ಶನ್, ಜಿಲ್ಲಾ ಆಡಿಟ್ ಪ್ರಬಂಧಕರಾದ ಶ್ರೀಮತಿ ಶಕುಂತಲಾ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರುಗಳು ಮತ್ತು ಕಛೇರಿ ಸಹಾಯಕರು ಉಪಸ್ಥಿತರಿದ್ದರು.