ಬೆಂಗಳೂರು ಪ್ರಾದೇಶಿಕ ಕಚೇರಿ ವ್ಯಾಪ್ತಿಯ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿ ನವಜೀವನ ಸಮಿತಿ ಸದಸ್ಯರ ಪೋಷಕರ ಸಭೆ

Janajagurthi Vedike News

ಬೆಂಗಳೂರು ಪ್ರಾದೇಶಿಕ ಕಚೇರಿ ವ್ಯಾಪ್ತಿಯ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿ ನವಜೀವನ ಸಮಿತಿ ಸದಸ್ಯರ ಪೋಷಕರ ಸಭೆಯನ್ನು ಜಿಲ್ಲಾ ನಿರ್ದೇಶಕರಾದ ಶ್ರೀ ಪದ್ಮಯ ಇವರು ದೀಪ ಬೆಳಗಿಸಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಪೋಷಕರಿಗೆ ನವಜೀವನ ಸಮಿತಿಯ ರಚನೆ, ಪಾನಮುಕ್ತರ ಮನೆ ಭೇಟಿ, ಯಶೋಗಾಥೆಗಳು, ಮಧ್ಯವರ್ಜನ ಶಿಬಿರ, ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ, ಜನಜಾಗೃತಿ ಕಾರ್ಯಕ್ರಮದ ಅನುಷ್ಠಾನದ ಕುರಿತು ಸಮಗ್ರ ಮಾಹಿತಿ ನೀಡಲಾಯಿತು ಮತ್ತು ವಲಯದಲ್ಲಿ ಈಗಾಗಲೇ ಇರುವ ನವ ಜೀವನ ಸಮಿತಿಯನ್ನು ಕಡ್ಡಾಯವಾಗಿ ಪುನಶ್ಚೇತನ ಮಾಡುವ ಕುರಿತು ತೀರ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಯೋಜನಾಧಿಕಾರಿ ಶ್ರೀ ಹರೀಶ್ ರವರು ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ಕೊನೆಯಲ್ಲಿ ಮತದಾರರಿಗೆ ಜಾಗೃತಿ ಮೂಡಿಸುವ ಬಿತ್ತಿ ಪತ್ರವನ್ನು ಬಿಡುಗಡೆ ಮಾಡಲಾಯಿತು. ಸಭೆಯಲ್ಲಿ ತಾಲೂಕಿನ ಎಲ್ಲಾ ಪೋಷಕರು ಭಾಗವಹಿಸಿದ್ದರು.