ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್(ರಿ)ಸಿದ್ದಾಪುರ ತಾಲೂಕು ಹಾಗೂ ಪೊಲೀಸ್ ಇಲಾಖೆ ಸಿದ್ದಾಪುರ ಇವರ ಸಹಯೋಗದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಪ್ರಯುಕ್ತ ಕರಪತ್ರ ಬಿಡುಗಡೆ ಹಾಗೂ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದಲ್ಲಿ ಪೊಲೀಸ್ ಉಪ ನಿರೀಕ್ಷಕರಾದ ಶ್ರೀಮತಿ ಗೀತಾ ಅವರು ಕರಪತ್ರವನ್ನು ಬಿಡುಗಡೆ ಮಾಡಿ ಇಂದಿನ ದಿನದಲ್ಲಿ ಯುವ ಜನತೆ ಮಾದಕ ವ್ಯಸನಕ್ಕೆ ತುತ್ತಾಗಿ ತಮ್ಮ ಬದುಕನ್ನು ಹಾಳು ಮಾಡಿಕೊಳ್ಳುವದರೊಟ್ಟಿಗೆ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿದ್ದಾರೆ. ನಮ್ಮ ಮನೆಯಿಂದಲೇ ಮಕ್ಕಳಿಗೆ ಮಾದಕ ವ್ಯಸನಗಳಿಗೆ ತುತ್ತಾಗದಂತೆ ಜಾಗ್ರತೆ ಮೂಡಿಸುವ ಅವಶ್ಯಕತೆಇದೆ ಹಾಗೂ ಪ್ರತಿನಿತ್ಯ ಪೋಷಕರು ತಮ್ಮ ಮಕ್ಕಳ ಚಲನವಲನದ ಬಗ್ಗೆ ನಿಗಾ ವಹಿಸುವಂತೆ, ಮಕ್ಕಳು ಮೊಬೈಲ್ ಬಳಕೆ ಮಾಡುತ್ತಿದ್ದಲ್ಲಿ ಜಾಗ್ರತೆ ವಹಿಸುವಂತೆ ಮಾಹಿತಿಯನ್ನು ನೀಡಿದರು.ಜಿಲ್ಲಾ ಜನಜಾಗ್ರತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷರಾದಂತಹ ಸುಭಾಸ್ ನಾಯ್ಕ್ ರವರು ಮಾತನಾಡಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಪ್ರೌಢಶಾಲೆ ಮತ್ತು ಕಾಲೇಜ್ ಮಟ್ಟದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಮೂಲಕ, ಮಧ್ಯವರ್ಜನ ಶಿಬಿರದ ಮೂಲಕ, ಒಕ್ಕೂಟದಲ್ಲಿ ಸದಸ್ಯರಿಗೆ ಮಾದಕ ವ್ಯಸನ ಸೇವನೆಯಿಂದ ಆಗುವಂಥ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವಂಥದ್ದು ಹೀಗೆ ನೂರಾರು ಕಾರ್ಯಕ್ರಮಗಳನ್ನು ಉತ್ತಮ ಸಮಾಜ ನಿರ್ಮಾಣಕ್ಕಾಗಿ ಹಮ್ಮಿಕೊಳ್ಳುತ್ತಿದ್ದು ಇವತ್ತಿನ ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಕಾರ್ಯಕ್ರಮದ ಮೂಲಕ ಜನರಲ್ಲಿ ಇನ್ನಷ್ಟು ಜಾಗೃತಿ ಮೂಡಿಸುವಂತಹ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದು ತಿಳಿಸಿ, ಪ್ರಥಮದಲ್ಲಿ ನಾವು ಬದಲಾವಣೆಯಾಗಿ ನಮ್ಮಿಂದ ಇತರರನ್ನು ಬದಲಾವಣೆ ಮಾಡಲಿಕ್ಕೆ ಜಾಗೃತಿ ಕಾರ್ಯಕ್ರಮ ಬಹಳ ಪ್ರಮುಖವಾದದ್ದು ಎಂದು ತಿಳಿಸಿದರು.ಕಾರ್ಯಕ್ರಮ ದಲ್ಲಿ ASI ರಮೇಶ್ ಗೌಡ ಹಾಗೂ ಹವಾಲ್ದಾರರಾದ ರಮೇಶ್ ಅವರು ಮಾಹಿತಿಯನ್ನು ನೀಡಿದರು.ಕಾರ್ಯಕ್ರಮದಲ್ಲಿ ಶೌರ್ಯ ತಂಡದ ಮಾಸ್ಟರ್ ಮಂಜುನಾಥ್ ಹಾಗೂ ಸದಸ್ಯರು, ತಾಲೂಕಿನ ಎಲ್ಲಾ ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿಗಳು, ಒಕ್ಕೂಟದ ಅಧ್ಯಕ್ಷರು /ಪದಾಧಿಕಾರಿಗಳು, ಸೇವಾಪ್ರತಿನಿಧಿಗಳು, ಸಂಘದ ಸದಸ್ಯರು, ಪೊಲೀಸ್ ಇಲಾಖೆಯ ಎಲ್ಲಾ ಸಿಬ್ಬಂದಿಗಳು, ಯೋಜನಾ ಕಚೇರಿಯ ಸಹಾಯಕ ಪ್ರಬಂಧಕರು ಹಾಗೂ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿರಿದ್ದರು.ಕಾರ್ಯಕ್ರಮದಲ್ಲಿ ಕೃಷಿ ಮೇಲ್ವಿಚಾರಕರಾದ ಮಹಾದೇವ ಬಿ. ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಮೇಲ್ವಿಚಾರಕರಾದ ಗಿರೀಶ್ ವಂದಿಸಿದರು.
