226 ನೇ ವಿಶೇಷ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಧರ್ಮಸ್ಥಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ ಇದರ ಸಹಭಾಗಿತ್ವದಲ್ಲಿ ಪರಮಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ “ಜಾಗೃತಿಸೌಧ” ದಲ್ಲಿ 226ನೇ ವಿಶೇಷ ಮದ್ಯವರ್ಜನ ಶಿಬಿರ(1804 ನೇ ರಾಜ್ಯ ಮಟ್ಟದ) ಉದ್ಘಾಟನೆಗೊಂಡಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಿಬಿರದ ವೈದ್ಯಾಧಿಕಾರಿಯವರಾದ ಡಾ. ಶ್ರೀ ಮೋಹನ್ ದಾಸ ಗೌಡ ಇವರು ನೆರವೇರಿಸಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯ್ಸ್ ರವರು ಜನಜಾಗೃತಿ ವೇದಿಕೆಯ ಹುಟ್ಟು, ಬೆಳವಣಿಗೆ, ನಡೆದು ಬಂದ ಹಾದಿ, ಸಾಧನೆಗಳ ಪರಿಚಯದೊಂದಿಗೆ ಪ್ರಾಸ್ತಾವಿಕ ಮಾತನಾಡಿದರು. ವೇದಿಕೆಯಲ್ಲಿ ಶ್ರೀ ಮಾಧವ ಗೌಡ ಆಡಳಿತಾತ್ಮಕ ಯೋಜನಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ಕಛೇರಿ ಬೆಳ್ತಂಗಡಿ, ಶ್ರೀ ಕಿಶೋರ್ ಪ್ರಬಂಧಕರು
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ, ಶಿಬಿರಾಧಿಕಾರಿಗಳಾದ ಶ್ರೀ ದಿನೇಶ್ ಮರಾಠಿ, ಆರೋಗ್ಯ ಸಹಾಯಕಿಯಾದ ಶ್ರೀಮತಿ ಜಯಲಕ್ಷ್ಮಿ, ಕಚೇರಿ ಸಹಾಯಕರು ಉಪಸ್ಥಿತರಿದ್ದರು. ಕರ್ನಾಟಕ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸಿದ ವಿಶೇಷ ಶಿಬಿರಾರ್ಥಿಗಳು ಮತ್ತು ಅವರ ಕುಟುಂಬದ ಸದಸ್ಯರುಗಳು ಕಾರ್ಯಕ್ರಮದ ಕೇಂದ್ರ ಬಿಂದುಗಳಾಗಿ ಭಾಗವಹಿಸಿದ್ದರು. ನವಜೀವನ ಸಮಿತಿಯ ಸದಸ್ಯರುಗಳು ತಮ್ಮ ವೈಯಕ್ತಿಕ ಪರಿಚಯದೊಂದಿಗೆ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಸಂಶೋಧನಾ ಕೇಂದ್ರದ ಸಿಬ್ಬಂದಿಗಳು, ಸ್ವಯಂ ಸೇವಕರು ಮತ್ತು ನವಜೀವನ ಸಮಿತಿ ಸದಸ್ಯರುಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.