ಶ್ರೀ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ “ಜಾಗೃತಿಸೌಧ” ದಲ್ಲಿ ನಡೆದ 226 ನೇ ವಿಶೇಷ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು ನಡೆಸಿಕೊಟ್ಟಿರುತ್ತಾರೆ. ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಮಾಧವ ಗೌಡ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು. 77 ಶಿಬಿರಾರ್ಥಿಗಳು ನವಜೀವನಕ್ಕೆ ಪಾದಾರ್ಪಣೆ ಮಾಡಿದರು.