245 ನೇ ವಿಶೇಷ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ಧರ್ಮಸ್ಥಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ ಇದರ ಸಹಭಾಗಿತ್ವದಲ್ಲಿ ಪರಮಪೂಜ್ಯ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾ|| ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ “ಜಾಗೃತಿಸೌಧ” ದಲ್ಲಿ 245 ನೇ ವಿಶೇಷ ಮದ್ಯವರ್ಜನ ಶಿಬಿರ (1910 ನೇ ರಾಜ್ಯ ಮಟ್ಟದ ಶಿಬಿರ) ಉದ್ಘಾಟನೆಗೊಂಡಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಿಬಿರದ ವೈದ್ಯಾಧಿಕಾರಿ ಹಾಗೂ ಆರ್ಯಭಟ ಪ್ರಶಸ್ತಿ ಪುರಸ್ಕೃತ ವೈದ್ಯರಾದ ಡಾ. ಮೋಹನದಾಸ ಗೌಡ ಇವರು ನೆರವೇರಿಸಿದರು. ಶ್ರೀ ವಿವೇಕ್ ವಿ. ಪಾಯಸ್ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರು ಜನಜಾಗೃತಿ ಪ್ರಾದೇಶಿಕ ವಿಭಾಗ ಬೆಳ್ತಂಗಡಿ ಇವರು ಜನಜಾಗೃತಿ ವೇದಿಕೆಯ ಹುಟ್ಟು, ಬೆಳವಣಿಗೆ, ನಡೆದು ಬಂದ ಹಾದಿ ಮತ್ತು ಅಸಾಮಾನ್ಯ ಸಾಧನೆಗಳ ಪರಿಚಯದೊಂದಿಗೆ ಪ್ರಾಸ್ತಾವಿಕ ಮಾತನಾಡಿ ಅತಿಥಿಗಳು, ಶಿಬಿರಾರ್ಥಿಗಳು ಮತ್ತು ಅವರ ಕುಟುಂಬದವರನ್ನು ಸ್ವಾಗತಿಸಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಮಾಧವ ಗೌಡ ಆಡಳಿತಾತ್ಮಕ ಯೋಜನಾಧಿಕಾರಿ ಜನಜಾಗೃತಿ ಪ್ರಾದೇಶಿಕ ವಿಭಾಗ ಬೆಳ್ತಂಗಡಿ, ಶ್ರೀ ಪ್ರಸಾದ್ ನಿವೃತ್ತ ಮುಖ್ಯ ಆಡಳಿತ ಅಧಿಕಾರಿ ನಿಮಾನ್ಸ್ ಆಸ್ಪತ್ರೆ ಬೆಂಗಳೂರು, ಶ್ರೀ ಕಿಶೋರ್ ಪ್ರಬಂಧಕರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ, ಜ್ಯೋತಿ ವಲಯಾಧ್ಯಕ್ಷರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ಚಾರ ವಲಯ, ಆಪ್ತ ಸಲಹೆಗಾರರಾದ ಶ್ರೀ ಮಧು, ಶಿಬಿರಾಧಿಕಾರಿಗಳಾದ ಶ್ರೀ ದಿವಾಕರ್, ಶ್ರೀ ವಿದ್ಯಾಧರ್, ಶ್ರೀ ರಮೇಶ್, ಶ್ರೀ ನಾಗೇಂದ್ರ, ಆರೋಗ್ಯ ಸಹಾಯಕರಾದ ಶ್ರೀಮತಿ ಪ್ರೆಸಿಲ್ಲಾ ಡಿ’ಸೋಜ, ಶ್ರೀಮತಿ ಜಯಲಕ್ಷ್ಮಿ, ಶ್ರೀಮತಿ ಫಿಲೋಮಿನಾ ಡಿ’ಸೋಜ, ಶ್ರೀಮತಿ ನೇತ್ರಾವತಿ, ಕು.ರಂಜಿತಾ, ಶ್ರೀ ವೆಂಕಟೇಶ್ ಇವರುಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸಿದ ವಿಶೇಷ ಶಿಬಿರದ ಶಿಬಿರಾರ್ಥಿಗಳು ಮತ್ತು ಅವರ ಕುಟುಂಬದ ಸದಸ್ಯರುಗಳು ಭಾಗವಹಿಸಿದ್ದರು. ವಿಶೇಷ ಶಿಬಿರಕ್ಕೆ ಆಗಮಿಸಿದ ಸಾಧಕ ನವಜೀವನ ಸಮಿತಿಯ ಸದಸ್ಯರುಗಳು ತಮ್ಮ ವೈಯಕ್ತಿಕ ಪರಿಚಯದೊಂದಿಗೆ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಸಂಶೋಧನಾ ಕೇಂದ್ರದ ಸಿಬ್ಬಂದಿಗಳು, ಸ್ವಯಂ ಸೇವಕರು ಮತ್ತು ನವಜೀವನ ಸಮಿತಿ ಸದಸ್ಯರುಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.