ಧಾರವಾಡ ಪ್ರಾದೇಶಿಕ ವಿಭಾಗದ ಹಾವೇರಿ ಜಿಲ್ಲಾ ಜನಜಾಗೃತಿ ವೇದಿಕೆ ಸಭೆ

Janajagurthi Vedike News

ಹಾವೇರಿ ಜಿಲ್ಲಾ ಜನಜಾಗೃತಿ ವೇದಿಕೆ ಸಭೆಯನ್ನು ವೇದಿಕೆ ಅಧ್ಯಕ್ಷರಾದ ಶ್ರೀಯುತ ಕಲ್ಯಾಣಕುಮಾರ ಶೆಟ್ಟರರವರು ದೀಪ ಬೆಳಗಿಸುವ ಮುಖೇನ ಉದ್ಘಾಟಿಸಿದರು. ಸಭೆಯನ್ನು ಪ್ರಾರ್ಥನೆ ಮೂಲಕ ಪ್ರಾರಂಭ ಮಾಡಲಾಯಿತು. ಸಭೀಕರನ್ನು ಜಿಲ್ಲಾ ವೇದಿಕೆಯ ಕಾರ್ಯದರ್ಶಿಗಳಾದ ನಾಗರಾಜ ಶೆಟ್ಟಿಯವರು ಸ್ವಾಗತಿಸಿ ದರು. ಸಭೆಯಲ್ಲಿ ನವಜೀವನ ಸಮಿತಿ ಬಲವರ್ಧನೆ, ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮಗಳ ಬಗ್ಗೆ, ಮುಂದಿನ ದಿನಗಳಲ್ಲಿ ನಡೆಯುವ ಶಿಬಿರಗಳ ಪೂರ್ವ ತಯಾರಿ ಬಗ್ಗೆ, ಶಿಬಿರ ನಡೆಯುವ ಸ್ಥಳಗಳ ಬಗ್ಗೆ, ವಲಯಕ್ಕೊಂದು ನವಜೀವನ ಸಮಿತಿ ರಚನೆ, ಸಿಸಿ ಖಾತೆ ಬದಲಾವಣೆ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಧಾರವಾಡ ಪ್ರಾದೇಶಿಕ ನಿರ್ದೇಶಕರು ಉಪಸ್ಥಿತರಿದ್ದು, ವೇದಿಕೆಯ ಕಾರ್ಯಕ್ರಮಗಳ ಬಗ್ಗೆ, ಮುಂದಿನ ದಿನಗಳಲ್ಲಿ ಪದಾಧಿಕಾರಿಗಳ ಸಹಕಾರದಿಂದ ವೇದಿಕೆಯ ಕಾರ್ಯಕ್ರಮಗಳನ್ನು ಉತ್ತಮವಾಗಿ ಸಂಘಟಿಸಲು ಎಲ್ಲರ ಸಹಕಾರ ಅಗತ್ಯ ಎಂದು ತಿಳಿಸಿದರು. ಸಭೆಯಲ್ಲಿ ಎಲ್ಲ ಪದಾಧಿಕಾರಿಗಳು, 7 ತಾಲೂಕುಗಳ ಕ್ಷೇತ್ರ ಯೋಜನಾಧಿಕಾರಿಗಳು, MIS ಯೋಜನಾಧಿಕಾರಿಗಳು, ಜನಜಾಗೃತಿ ಮೇಲ್ವಿಚಾರಕರು ಉಪಸ್ಥಿತರಿದ್ದರು. ಸಭೆಯಲ್ಲಿ ಕಲ್ಯಾಣ ಕುಮಾರ ಶೆಟ್ಟರ ಅಧ್ಯಕ್ಷಿಯ ನುಡಿಗಳನ್ನಾಡಿದರು. ಹಾನಗಲ್ ಯೋಜನಾಧಿಕಾರಿಗಳಾದ ರಾಘವೇಂದ್ರ ಪಟಗಾರರವರು ಸಭೆಯನ್ನು ನಿರೂಪಿಸಿ, ವಂದಿಸಿದರು