ಶ್ರೀ ಧರ್ಮಸ್ಥಳ ಸೇವಾ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು ಓಣಿಯ ಸ್ವಚ್ಚತಾ ಸೇವಾಕಾರ್ಯ ನಡೆಸಿ ಸಾಮಾಜಿಕ ಕಳಕಳಿಯನ್ನು ಮೆರೆದಿದ್ದಾರೆ. ವಿಪತ್ತು ನಿರ್ವಹಣೆ ಸಂಯೋಜಕಿ ಪೂಜಾ ಪಾಟೀಲ್ ಅವರ ನೇತ್ರತ್ವದಲ್ಲಿ ಸ್ವಚ್ಚತಾ ಕಾರ್ಯ ನಡೆದಿದ್ದು ಸ್ವಯಂಸೇವಕರಾದ ನೇತ್ರಾವತಿ, ನಾಗರಾಜ್, ಸುಭಾಷ್, ಪೂಜಾ, ಪ್ರೀತಿ, ರೇಣುಕಾ, ಸಾಹಿಲ್ ಸ್ವಚ್ಚತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಸಾರ್ವಜನಿಕ ರಿಗೆ ಗಿಡಗಳನ್ನು ವಿತರಣೆ ಮಾಡಲಾಯಿತುಇವರು ನಡೆದಿದೆ ಸೇವಾಕಾರ್ಯ ಸ್ಥಳೀಯರ ಮೆಚ್ಚುಗೆಗೆ ಪಾತ್ರವಾಗಿದೆ.
