ಧಾರವಾಡ ಪ್ರಾದೇಶಿಕ ವಿಭಾಗದ ಶಿಗ್ಗಾವ್ ತಾಲೂಕಿನ ಅರಟಾಳದಲ್ಲಿ ನಡೆದ 1809 ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀ ಧರನೇಂದ್ರ ಪುಟ್ಟಣ್ಣವರ, ಜನಜಾಗೃತಿ ಯೋಜನಾಧಿಕಾರಿಗಳಾದ ಭಾಸ್ಕರ್ ಎನ್. , ತಾಲೂಕಿನ ಕ್ಷೇತ್ರ ಯೋಜನಾಧಿಕಾರಿ ಉಮಾ ಎನ್. ಜಿ., ನವಜೀವನ ಸದಸ್ಯರು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು.