ಮೈಸೂರು ಪ್ರಾದೇಶಿಕ ವಿಭಾಗದ ಮೈಸೂರು ಜಿಲ್ಲೆಯ ಬನ್ನೂರು ತಾಲೂಕಿನಲ್ಲಿ 1814 ನೇ ಮಧ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಮನೋಜ್ ಕುಮಾರ್ ಆರಕ್ಷಕ ನಿರೀಕ್ಷಕರು ಬನ್ನೂರು ಇವರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು. ಕಾರ್ಯಕ್ರಮದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು ಶ್ರೀ ವೆಂಕಟೇಶ, ಶ್ರೀ ಪ್ರಭುಸ್ವಾಮಿ ಅಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ಮೈಸೂರು, ತಾಲೂಕಿನ ಯೋಜನಾಧಿಕಾರಿಗಳು ಶ್ರೀಮತಿ ಉಮಾವತಿ, ಮೈಸೂರು ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಶ್ರೀ ಮಾಧವ, ಶಿಬಿರಾಧಿಕಾರಿ, ಆರೋಗ್ಯ ಕಾರ್ಯಕರ್ತರು, ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು, ನವಜೀವನ ಸಮಿತಿ ಸದಸ್ಯರು ಉಪಸ್ಥಿತರಿದ್ದರು.