243 ನೇ ವಿಶೇಷ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ

Janajagurthi Vedike News

ಶ್ರೀ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಜಾಗೃತಿಸೌಧದಲ್ಲಿ ನಡೆದ 243 ನೇ ವಿಶೇಷ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ವಿಭಾಗದ ಆಡಳಿತಾತ್ಮಕ ಯೋಜನಾಧಿಕಾರಿಗಳಾದ ಶ್ರೀ ಮಾಧವ್ ಗೌಡ ರವರು ಮತ್ತು ಉಡುಪಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿಗಳಾದ ಶ್ರೀ ಗಣೇಶ್ ಆಚಾರ್ಯ ರವರು ನಡೆಸಿಕೊಟ್ಟಿರುತ್ತಾರೆ. ಕಾರ್ಯಕ್ರಮದಲ್ಲಿ ಶಿಬಿರಾಧಿಕಾರಿಗಳಾದ ಶ್ರೀ ದಿನೇಶ್ ಮತ್ತು ಶ್ರೀ ಕುಮಾರ್, ಆಪ್ತ ಸಮಾಲೋಚಕರಾದ ಶ್ರೀ ಮಧು, ಆರೋಗ್ಯ ಸಹಾಯಕರಾದ ಶ್ರೀಮತಿ ಫೀಲೋಮಿನಾ ಡಿ’ಸೋಜಾ, ಕುಮಾರಿ ರಂಜಿತಾ, ಶ್ರೀ ವೆಂಕಟೇಶ್ ಮತ್ತು ನವಜೀವನ ಸಮಿತಿ ಸದಸ್ಯರು ಉಪಸ್ಥಿತರಿದ್ದರು.