ಪರಮಪೂಜ್ಯ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾ|| ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಕೊಕ್ಕನೂರು ವಲಯ ಇವರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ಮಲೇಬೆನ್ನೂರು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ದಾವಣಗೆರೆ ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ ಮತ್ತು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಮಾರ್ಗದರ್ಶನದೊಂದಿಗೆ ಶ್ರೀ ಗುರು ಕರಿಬಸವೇಶ್ವರ ಗದ್ದಿಗೆ ಟ್ರಸ್ಟ್ ಕಮಿಟಿ (ರಿ.) ಉಕ್ಕಡಗಾತ್ರಿ, ಗ್ರಾಮ ಪಂಚಾಯಿತಿ ಉಕ್ಕಡಗಾತ್ರಿ, ಶ್ರೀ ಗುರು ಕರಿಬಸವೇಶ್ವರ ಗದ್ದಿಗೆ ವಿದ್ಯಾ ಸಂಸ್ಥೆ ಆಡಳಿತ ಮಂಡಳಿ ಉಕ್ಕಡಗಾತ್ರಿ, ಪ್ರಾಥಮಿಕ ಆರೋಗ್ಯ ಕೇಂದ್ರ ಉಕ್ಕಡಗಾತ್ರಿ, ಪೊಲೀಸ್ ಠಾಣೆ ಮಲೇಬೆನ್ನೂರು, ಕಾರ್ಯನಿರತ ಪತ್ರಕರ್ತರ ವೇದಿಕೆ ಮಲೇಬೆನ್ನೂರು, ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕ ಮಲೇಬೆನ್ನೂರು, ಸ್ಥಳೀಯ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಕ್ಕಡಗಾತ್ರಿ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಮಲೇಬೆನ್ನೂರು, ನವಜೀವನ ಸಮಿತಿ ಮಲೇಬೆನ್ನೂರು ಮತ್ತು ದಾನಿಗಳ ಸಹಕಾರದೊಂದಿಗೆ ಜರುಗುವ 1922 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭ ತಾಲೂಕಿನ ಶ್ರೀ ಕರಿಬಸವೇಶ್ವರ ಗದ್ದಿಗೆ ಕಲ್ಯಾಣ ಮಂಟಪ ಉಕ್ಕಡಗಾತ್ರಿಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ಭಾರತಿ ಸಿದ್ದಪ್ಪ ಕಟಿಗೇರ ಅಧ್ಯಕ್ಷರು ಗ್ರಾಮ ಪಂಚಾಯಿತಿ ಉಕ್ಕಡಗಾತ್ರಿ ಇವರು ನೆರವೇರಿಸಿ ಉದ್ಘಾಟನಾ ಮಾತುಗಳನ್ನಾಡಿದರು. ಶ್ರೀ ಎಸ್. ಸುರೇಶ್ ಅಧ್ಯಕ್ಷರು 1922 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಉಕ್ಕಡಗಾತ್ರಿ ಇವರು ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮದ ಕುರಿತು ಅಧ್ಯಕ್ಷೀಯ ಮಾತುಗಳನ್ನಾಡಿದರು. ಶ್ರೀ ನಾಗರಾಜ್ ಕುಲಾಲ್ ಯೋಜನಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ವಿಭಾಗ ಚಿತ್ರದುರ್ಗ ಇವರು ಜನಜಾಗೃತಿ ವೇದಿಕೆ ಪ್ರಾರಂಭ, ಜನಜಾಗೃತಿ ವೇದಿಕೆ ಮೂಲಕ ಸಾಮಾಜಿಕ ಆಂದೋಲನ, ಮದ್ಯವರ್ಜನ ಶಿಬಿರ ಅನುಷ್ಠಾನ, ಮದ್ಯವರ್ಜನ ಶಿಬಿರದ ರೂಪುರೇಷೆ, ಮದ್ಯವರ್ಜನ ಶಿಬಿರದ ದೈನಂದಿನ ದಿನಚರಿ ಕಾರ್ಯಕ್ರಮಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಶ್ರೀ ಲಕ್ಷ್ಮಣ್ ಜಿಲ್ಲಾ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ದಾವಣಗೆರೆ ಜಿಲ್ಲೆ ಇವರು ಮಾತನಾಡಿ ಮದ್ಯವರ್ಜನ ಶಿಬಿರ ಇದೊಂದು ಪವಿತ್ರ ಕಾರ್ಯಕ್ರಮ. ಇದು ಕೇವಲ ಧರ್ಮಸ್ಥಳದ ಕಾರ್ಯಕ್ರಮ ಅಲ್ಲ. ಬದಲಾಗಿ ಇದೊಂದು ಸಮುದಾಯದ ಸಹಭಾಗಿತ್ವದ ಕಾರ್ಯಕ್ರಮ. ಆದ್ದರಿಂದ ಸಾರ್ವಜನಿಕರ ತನು-ಮನ-ಧನ ಸಹಕಾರದೊಂದಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆರಂಭ, ವಿಸ್ತರಣೆಯ ಅನುಭವ ಹಾಗೂ ಅಸಾಮಾನ್ಯ ಸಾಧನೆಗಳ ಪರಿಚಯದೊಂದಿಗೆ ಸಮುದಾಯದ ಕಾರ್ಯಕ್ರಮಗಳಾದ ನಮ್ಮೂರು ನಮ್ಮ ಕೆರೆ, ರುದ್ರಭೂಮಿ ಅನುದಾನ, ಶಿಥಿಲಗೊಂಡ ದೇವಸ್ಥಾನಗಳ ಜೀರ್ಣೋದ್ಧಾರ, ಶಾಲೆಗಳಿಗೆ ಪೀಠೋಪಕರಣ ಒದಗಣೆ, ಜ್ಞಾನದೀಪ ಕಾರ್ಯಕ್ರಮದ ಮುಖೇನ ಗೌರವ ಶಿಕ್ಷಕರ ಒದಗಣೆ, ಶಿಷ್ಯವೇತನ, ಮಾಸಾಶನ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಮತ್ತು ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಧಾರ್ಮಿಕ ಕ್ಷೇತ್ರ ಹೀಗೆ ಹಲವು ವಿಭಾಗಗಳಲ್ಲಿ ಜನ ಮೆಚ್ಚುಗೆಯೊಂದಿಗೆ ಸಂಸ್ಥೆಯು ವಿಶ್ವ ಮಾನ್ಯತೆಯನ್ನು ಪಡೆದುಕೊಂಡಿದೆ. ಸಮುದಾಯದ ಕಾರ್ಯಕ್ರಮಗಳಲ್ಲಿ ಪೂಜ್ಯರ ಅತೀ ಪ್ರೀತಿಯ ಕಾರ್ಯಕ್ರಮವಾದ ಮದ್ಯವರ್ಜನ ಶಿಬಿರವನ್ನು ಸಂಘಟಿಸಿದ ವ್ಯವಸ್ಥಾಪನಾ ಸಮಿತಿ ಹಾಗೂ ಜನಜಾಗೃತಿ ವೇದಿಕೆಯ ಅತ್ಯುತ್ತಮ ಸಹಕಾರವನ್ನು ಸ್ಮರಿಸಿ ಕಾರ್ಯಕ್ರಮಕ್ಕೆ ಶುಭಾಶಯವನ್ನು ಕೋರಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಎನ್. ಜಿ. ನಾಗನಗೌಡ್ರು ನಿಕಟಪೂರ್ವ ಉಪಾಧ್ಯಕ್ಷರು ಜಿಲ್ಲಾ ಜನಜಾಗತಿ ವೇದಿಕೆ ಟ್ರಸ್ಟ್ (ರಿ.) ದಾವಣಗೆರೆ, ಶ್ರೀ ಜಿ. ಮಂಜುನಾಥ ಪಟೇಲ್ ಉಪಾಧ್ಯಕ್ಷರು ಜಿಲ್ಲಾ ಜನಜಾಗತಿ ವೇದಿಕೆ ಟ್ರಸ್ಟ್ (ರಿ.) ದಾವಣಗೆರೆ, ಶ್ರೀ ವೀರನಗೌಡ ಹಲಗಪ್ಪನವರ ಸದಸ್ಯರು ಶ್ರೀ ಗುರು ಕರಿಬಸವೇಶ್ವರ ಗದ್ದಿಗೆ ಟ್ರಸ್ಟ್ ಕಮಿಟಿ (ರಿ.) ಉಕ್ಕಡಗಾತ್ರಿ, ಶ್ರೀ ಜಿಗಳಿ ಇಂಧೂದರ್ ಸದಸ್ಯರು ಶ್ರೀ ಗುರು ಕರಿಬಸವೇಶ್ವರ ಗದ್ದಿಗೆ ಟ್ರಸ್ಟ್ ಕಮಿಟಿ (ರಿ.) ಉಕ್ಕಡಗಾತ್ರಿ, ಶ್ರೀ ಪ್ರಕಾಶ್ ಕೋಟೇರ ಶ್ರೀ ಗುರು ಕರಿಬಸವೇಶ್ವರ ಗದ್ದಿಗೆ ಟ್ರಸ್ಟ್ ಕಮಿಟಿ (ರಿ.) ಉಕ್ಕಡಗಾತ್ರಿ, ಶ್ರೀ ಬಸವನಗೌಡ ಬಿ. ಶ್ರೀ ಗುರು ಕರಿಬಸವೇಶ್ವರ ಗದ್ದಿಗೆ ಟ್ರಸ್ಟ್ ಕಮಿಟಿ (ರಿ.) ಉಕ್ಕಡಗಾತ್ರಿ, ಶ್ರೀ ರುದ್ರಪ್ಪ ತಂಬಳಿ ಮುಖಂಡರು ವಾಸನ, ಶ್ರೀ ಹನುಮಂತರಾಯ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ದಾವಣಗೆರೆ, ಶ್ರೀ ಜಿಗಳಿ ಪ್ರಕಾಶ್ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ದಾವಣಗೆರೆ, ಶ್ರೀ ವಸಂತ ಎಸ್. ದೇವಾಡಿಗ ಕ್ಷೇತ್ರ ಯೋಜನಾಧಿಕಾರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ಮಲೇಬೆನ್ನೂರು ಇವರುಗಳು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು. ಕಾರ್ಯಕ್ರಮದಲ್ಲಿ ಶ್ರೀ ನಂದಕುಮಾರ್ ಪಿ. ಪಿ. ಶಿಬಿರಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಶ್ರೀಮತಿ ನೇತ್ರಾವತಿ ಆರೋಗ್ಯ ಸಹಾಯಕಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಶ್ರೀ ರುದ್ರಪ್ಪ ಹೂಗಾರ್ ಮೇಲ್ವಿಚಾರಕರು ಜನಜಾಗೃತಿ ವಿಭಾಗ ಪ್ರಾದೇಶಿಕ ಕಛೇರಿ ಚಿತ್ರದುರ್ಗ ಇವರು ಉಪಸ್ಥಿತರಿದ್ದರು. ಶ್ರೀಮತಿ ರಂಜಿತಾ ಮೇಲ್ವಿಚಾರಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ಕೊಕ್ಕನೂರು ವಲಯ, ತಾಲೂಕಿನ ಎಲ್ಲಾ ಮೇಲ್ವಿಚಾರಕರುಗಳು, ಪತ್ರಿಕಾ ಮಾಧ್ಯಮದವರು, ವಲಯದ ಸೇವಾಪ್ರತಿನಿಧಿಗಳು, ಒಕ್ಕೂಟದ ಅಧ್ಯಕ್ಷರು/ಪದಾಧಿಕಾರಿಗಳು, ಪ್ರಗತಿಬಂಧು ಸ್ವ-ಸಹಾಯ ಸಂಘದ ಸದಸ್ಯರುಗಳು, ನವಜೀವನ ಸಮಿತಿ ಸದಸ್ಯರುಗಳು ಮತ್ತು ಸಾರ್ವಜನಿಕರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.
