ಧಾರವಾಡ ಪ್ರಾದೇಶಿಕ ವಿಭಾಗದ ಚಿಕ್ಕೋಡಿ ಜಿಲ್ಲಾ ಯೋಜನಾ ವ್ಯಾಪ್ತಿಯ ಹುಕ್ಕೇರಿ ತಾಲೂಕಿನ ಮದಿಹಳ್ಳಿಯಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಅಂಗವಾಗಿ ಕರಪತ್ರ ಬಿಡುಗಡೆ ಹಾಗೂ ಮಾಹಿತಿ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಧಾರವಾಡ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ದುಗ್ಗೇಗೌಡ ಸರ್, ಚಿಕ್ಕೋಡಿ ಜಿಲ್ಲಾ ಜನಜಾಗೃತಿ ಅಧ್ಯಕ್ಷರಾದ ಎಸ್.ಟಿ.ಮುನವಳ್ಳಿ ಜಿಲ್ಲಾ ನಿರ್ದೇಶಕರಾದ ಕೃಷ್ಣ.ಟಿ.ಸರ್, ಶ್ರೀ ಲಕ್ಷ್ಮೀ ಸೌಹಾರ್ದ ಸಹಕಾರಿ ಬ್ಯಾಂಕ್ ನ ಮ್ಯಾನೇಜರ್, ಶ್ರೀ ಬಸವೇಶ್ವರ ಅರ್ಬನ್ ಕ್ರೇಡಿಟ್ ಸೌಹಾರ್ದ ಸಹಕಾರಿ ನಿಯಮಿತ ಮ್ಯಾನೇಜರ್, ಜನಜಾಗೃತಿ ವಿಿಾಗದ ಯೋಜನಾಧಿಕಾರಿ ನಾಗೇಶ್ ವೈ.ಎ , ಮದಿಹಳ್ಳಿ ಗ್ರಾ.ಪಂ.ಸದಸ್ಯರು ಉಪಸ್ಥಿತರಿದ್ದರು.
