ಧಾರವಾಡ ಪ್ರಾದೇಶಿಕ ವಿಭಾಗದ, ಧಾರವಾಡ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯನ್ನು ಇಂದು ಧಾರವಾಡದ ಪ್ರಾದೇಶಿಕ ಕಚೇರಿಯಲ್ಲಿ ಶ್ರೀ ರಾಜಣ್ಣ ಕೊರವಿ ರಾಜ್ಯಧ್ಯಕ್ಷರು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇವರ ಉಪಸ್ಥಿತಿಯಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಶ್ರೀ ದುಗ್ಗೇಗೌಡ ಪ್ರಾದೇಶಿಕ ನಿರ್ದೇಶಕರು, ಫಿರೋಜ್ ಖಂಡೇಕರ್, ಸತೀಶ್ ನಾಯ್ಕ, ಜಿಲ್ಲಾ ವೇದಿಕೆಯ ಪದಾಧಿಕಾರಿಗಳು ಧಾರವಾಡ ಜಿಲ್ಲೆಯ ಕ್ಷೇತ್ರ ಯೋಜನಾಧಿಕಾರಿಗಳು, ಜನಜಾಗೃತಿ ವಿಭಾಗದ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು. ವಿಶೇಷವಾಗಿ ಅಕ್ಟೋಬರ್.2 ಕಾರ್ಯಕ್ರಮ ದ ಬಗ್ಗೆ ಹಾಗೂ ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಸಮಾಜಸೇವಕರು ಉದ್ಯಮಿ ಶ್ರೀ ಸಂತೋಷ್ ಆರ್. ಶೆಟ್ಟಿ ಇವರನ್ನು ಜಿಲ್ಲಾಧ್ಯಕ್ಷರಾಗಿ ಶ್ರೀ ಪ್ರಭಾಕರ್ ನಾಯಕ್ ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.
