ಧಾರವಾಡ ಪ್ರಾದೇಶಿಕ ವಿಭಾಗದ ಜಗಳೂರು ತಾಲ್ಲೂಕಿನ ಹೋ. ಚಿ. ಬೋರಯ್ಯ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಸಲಾಯಿತು ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಗೌರವ ಸಲಹೆಗಾರರಾದ ಫಾದರ್ ವಿಲಿಯಂ ಮಿರಾಂದ ರವರು ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಡಾ. ಅರವಿಂದನ್, ಕಾಲೇಜಿನ ಪ್ರಾಂಶುಪಾಲರಾದ ಡಾ. ನಾರಾಯಣ್, ಡಾ. ಸುರೇಶ್ ಉಪನ್ಯಾಸಕರಾದ J. A. ಸೀತಾರಾಮ್, ಜನಜಾಗೃತಿ ವಿಭಾಗದ ಯೋಜನಾಧಿಕಾರಿ ನಾಗೇಶ್ ವೈ. ಎ, ಹಾಗೂ ವಲಯದ ಮೇಲ್ವಿಚಾರಕರು ಉಪಸ್ಥರಿದ್ದರು.
