ಉಡುಪಿ ತಾಲೂಕು ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ಸಭೆ

Janajagurthi Vedike News

ಕರಾವಳಿ ಪ್ರಾದೇಶಿಕ ವಿಭಾಗದ ಉಡುಪಿ ತಾಲೂಕು ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ಸಭೆಯನ್ನ ಪ್ರಾದೇಶಿಕ ನಿರ್ದೇಶಕರಾದ ಶ್ರೀ ದುಗ್ಗೆ ಗೌಡ ರವರು ಉದ್ಘಾಟಿಸಿ ಮಾಹಿತಿ ಮಾರ್ಗದರ್ಶನ ನೀಡಿದರು. ಸಭೆಯ ಅಧ್ಯಕ್ಷತೆಯನ್ನು ತಾಲೂಕು ವೇದಿಕೆ ಅಧ್ಯಕ್ಷರಾದ ಅಚ್ಯುತ ಪೂಜಾರಿಯವರು ವಹಿಸಿದ್ದರು. ಸಭೆಯಲ್ಲಿ ಜಿಲ್ಲಾ ಕಾರ್ಯದರ್ಶಿಗಳು / ನಿರ್ದೇಶಕರು ಶಿವರಾಯ ಪ್ರಭು ಹಾಗೂ ಕಾಪು, ಬ್ರಹ್ಮಾವರ, ಉಡುಪಿ ತಾಲೂಕುಗಳ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು, ನಿಕಟ ಪೂರ್ವ ತಾಲೂಕು ಅಧ್ಯಕ್ಷರುಗಳು ಹಾಗೂ ತಾಲೂಕು ಯೋಜನಾಧಿಕಾರಿಗಳು, ಜನಜಾಗೃತಿ ವಿಭಾಗದ ಯೋಜನಾಧಿಕಾರಿಗಳು ಮೇಲ್ವಿಚಾರಕರು ಉಪಸ್ಥಿತರಿದ್ದರು.