ಚಿಕ್ಕನಾಯಕನಹಳ್ಳಿ ತಾಲೂಕಿನ ಚಿಕ್ಕನಾಯಕನಹಳ್ಳಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಸಮಾಜ ಕಾರ್ಯ ವಿಭಾಗದ ಸಹಕಾರದೊಂದಿಗೆ “ವಿಶ್ವ ತಂಬಾಕು ವಿರೋಧಿ ದಿನಾಚರಣೆ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮವನ್ನು ಕಾಲೇಜು ಪ್ರಾಂಶುಪಾಲರು ಉದ್ಘಾಟನೆ ಮಾಡಿ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ದಿಬ್ಬದಹಳ್ಳಿ ಶ್ಯಾಮಸುಂದರರವರು ವಿಶೇಷ ಉಪನ್ಯಾಸ ನೀಡಿದರು.
