ಮೈಸೂರು ಪ್ರಾದೇಶಿಕ ವಿಭಾಗದ ಮಂಡ್ಯ ಜಿಲ್ಲೆಯ ಮಂಡ್ಯ ತಾಲೂಕಿನ ಶ್ರೀ ಸೋಮೇಶ್ವರ ಸಮುದಾಯ ಭವನ ಬೇವಿನಹಳ್ಳಿಯಲ್ಲಿ 1832 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಮಂಡ್ಯ ಜಿಲ್ಲೆಯ ಜಿಲ್ಲಾ ನಿರ್ದೇಶಕರಾದ ಶ್ರೀಮತಿ ಚೇತನಾ ಮತ್ತು ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಗ್ರಾಮ ಪಂಚಾಯಿತ್ ಅಧ್ಯಕ್ಷರು, ಊರಿನ ಗಣ್ಯರು, ಜನಜಾಗೃತಿ ವೇದಿಕೆ ಸದಸ್ಯರು ಹಾಗೂ ಮಂಡ್ಯ ಜಿಲ್ಲೆಯ ಯೋಜನೆಯ ಎಲ್ಲಾ ಕಾರ್ಯಕರ್ತರ ಸಮ್ಮುಖದಲ್ಲಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.
