ರಾಯಚೂರ್ ಜಿಲ್ಲೆಯ ಮಸ್ಕಿಯತಾಲೂಕಿನ ಶ್ರೀ ಭ್ರಮರಾಂಭ ದೇವಸ್ಥಾನದ ಸಭಾಂಗಣದಲ್ಲಿ ನಡೆದ ರಾಯಚೂರು ಜಿಲ್ಲಾ ಮಟ್ಟದ ಗಾಂಧಿ ಸ್ಮರಣೆ ಮತ್ತು ದುಶ್ಚಟಗಳ ವಿರುದ್ಧ ಜಾಗೃತಿ ಕಾರ್ಯಕ್ರಮವನ್ನು ಮಾಜಿ ಶಾಸಕರಾದ ಶ್ರೀ ಪ್ರತಾಪಗೌಡ ಪಾಟೀಲ್ ರವರು ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಪ್ರಾದೇಶಿಕ ನಿರ್ದೇಶಕರಾದ ಶ್ರೀ ಗಣೇಶ್ ಬಿ., ಜಿಲ್ಲಾ ಅಧ್ಯಕ್ಷರಾದ ಶಶಿಕಲಾ ಭೋವಿ, ಹನುಮಮ್ಮ ನಾಯ್ಕ್ , ಜಿಲ್ಲಾ ನಿರ್ದೇಶಕರಾದ ಸಂತೋಷ್ ಕುಮಾರ್ , ಮಹಾದೇವಪ್ಪ, ಎಮ್. ಅಮರೇಶ ಮುಂತಾದವರು ಉಪಸ್ಥಿತರಿದ್ದರು.
