ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ಪ್ರಥಮ ಬಿಎ ಬಿಕಾಂ ಬಿಎಸ್ಸಿ ಬಿಸಿಎ ಹೀಗೆ ಒಟ್ಟು ಒಂಬೈನೂರು ವಿದ್ಯಾರ್ಥಿಗಳನ್ನು ಸೇರಿಸಿಕೊಂಡು ರಾಷ್ಟ್ರೀಯ ಸೇವಾ ಯೋಜನೆಯ ದಿನವನ್ನು ಆಚರಿಸುವುದರೊಂದಿಗೆ ದುಶ್ಚಟಗಳ ವಿರುದ್ಧ ಜಾಗೃತಿ ಮೂಡಿಸಲಾಯಿತು .ಅದೇ ರೀತಿ ಎಲ್ಲಾ ವಿದ್ಯಾರ್ಥಿಗಳಿಗೆ ಆಯುಷ್ಮಾನ್ ಕಾರ್ಡ್ ಮಾಡುವ ಬಗ್ಗೆ ಮಾಹಿತಿ ನೀಡಲಾಯಿತು .ಕುರಿತಂತೆ ಗ್ರಾಮಾಭಿವೃದ್ಧಿ ಯೋಜನೆಯು ವಿದ್ಯಾರ್ಥಿಗಳಿಗೆ ಸ್ಪಂದಿಸಲಿದೆ. ಎನ್ನೆಸ್ಸೆಸ್ ನಾಯಕತ್ವದಲ್ಲಿಶೇಕಡ ನೂರು ವಿದ್ಯಾರ್ಥಿಗಳಿಗೆ ಆಯುಷ್ಮಾನ್ ಭಾರತ್ ಕಾರ್ಡ್ ಮಾಡಬೇಕೆಂದು ತಿಳಿಸಲಾಗಿದೆ. ಈ ನಿಟ್ಟಿನಲ್ಲಿ ಕಾಲೇಜಿನ ವಠಾರದಲ್ಲಿ ವ್ಯವಸ್ಥೆ ಮಾಡಲಾಗುವುದು .
