ಸಕಲೇಶಪುರ ತಾಲೂಕಿನಲ್ಲಿ ನಡೆದ 1853 ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ

Janajagurthi Vedike News

ಮೈಸೂರು ಪ್ರಾದೇಶಿಕ ವಿಭಾಗದ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎಸಳೂರು ನಂದೀಶ್ವರ ಸಭಾಭವನದಲ್ಲಿ ನಡೆದ 1853 ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮವನ್ನು ಜನಜಾಗೃತಿ ಮೈಸೂರು ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿಗಳಾದ ಶ್ರೀ ಮಾಧವ ನಾಯಕ್ ರವರು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಜನಜಾಗೃತಿ ಸದಸ್ಯರಾದ ಶ್ರೀ ಉಮನಾಥ ಸುವರ್ಣ, ತಾಲೂಕಿನ ಯೋಜನಾಧಿಕಾರಿ ಶ್ರೀ ಪುರುಷೋತ್ತಮ ಕೆ., ತಾಲೂಕಿನ ಮೇಲ್ವಿಚಾರಕರು, ತಾಲೂಕಿನ ಸೇವಾ ಪ್ರತಿನಿಧಿಗಳು, ತಾಲೂಕಿನ ಶೌರ್ಯ ವಿಪತ್ತು ತಂಡದ ಸದಸ್ಯರು, ನವಜೀವನ ಸಮಿತಿಯ ಸದಸ್ಯರು, ಒಕ್ಕೂಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.