ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕುಕ್ಕುಜಡ್ಕ ಅಮರ ಸಭಾಭವನದಲ್ಲಿ ನಡೆಯುತ್ತಿರುವ 1568 ನೇ ಮದ್ಯವರ್ಜನ ಶಿಬಿರದ 6 ನೇ ದಿನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾಕ್ಟರ್ ಎಲ್ ಹೆಚ್ ಮಂಜುನಾಥ್ ರವರು ಭೇಟಿ ನೀಡಿ 60 ಜನ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾರ್ಗದರ್ಶನ ನೀಡಿದರು, ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯ ಅಧ್ಯಕ್ಷರಾದ ವಿ ರಾಮಸ್ವಾಮಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ನಿರ್ದೇಶಕರಾಗಿ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್, ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಬೊಳ್ಳೂರು, ವ್ಯವಸ್ಥಾಪನ ಸಮಿತಿಯ ಗೌರವ ಅಧ್ಯಕ್ಷರು ಶ್ರೀ ಎಂ ಜಿ ಸತ್ಯನಾರಾಯಣ, ಶ್ರೀ ವಿಶ್ವನಾಥ ರೈ ಕಳಂಜ ಅಧ್ಯಕ್ಷರು ಜನಜಾಗೃತಿ ವೇದಿಕೆ ಸುಳ್ಯ ತಾಲೂಕು, ಪ್ರವೀಣ್ ಕುಮಾರ್ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದ.ಕ. 2, ಜಿಲ್ಲೆ, ನಾಗೇಶ್ ಪಿ ಯೋಜನಾಧಿಕಾರಿಗಳು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲೂಕು,ಉಪಸ್ಥಿತರಿದ್ದರು
