211ನೇ ವಿಶೇಷ ಮದ್ಯವರ್ಜನ ಶಿಬಿರದ ಉದ್ಘಾಟನೆ

Janajagurthi Vedike News

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಜಾಗೃತಿ ಸೌದದಲ್ಲಿ 211ನೇ ವಿಶೇಷ ಮದ್ಯವರ್ಜನ ಶಿಬಿರ ಉದ್ಘಾಟನೆಗೊಂಡಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಆರ್ಯಭಟ ಪ್ರಶಸ್ತಿ ಪುರಸ್ಕೃತರು ಹಾಗೂ ಶಿಬಿರದ ವೈದ್ಯಾಧಿಕಾರಿಗಳು ಆದ ಡಾ. ಮೋಹನದಾಸ ಗೌಡ ಇವರು ನೆರವೇರಿಸಿದರು.
ಶ್ರೀ ಮೋಹನ್ ಆಡಳಿತಾತ್ಮಕ ಯೋಜನಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕೇಂದ್ರ ಕಛೇರಿ ಬೆಳ್ತಂಗಡಿ ಇವರು ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಶ್ರೀ ಕಿಶೋರ್ ಪ್ರಬಂಧಕರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ, ಶ್ರೀ ಡಾ.ಸಂತೋಷ್ ವೈದ್ಯರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆ ಧಾರವಾಡ, ಶಿಬಿರಾಧಿಕಾರಿಗಳಾದ ಶ್ರೀ ನಂದಕುಮಾರ್ ಪಿ ಪಿ, ಶ್ರೀ ವಿದ್ಯಾಧರ್, ಆರೋಗ್ಯ ಸಹಾಯಕಿಯರಾದ ಕುಮಾರಿ ರಂಜಿತ, ಶ್ರೀಮತಿ ಪ್ರೆಸಿಲ್ಲಾ ಡಿಸೋಜಾ, ಶ್ರೀಮತಿ ಪಿಲೋಮಿನಾ ಡಿಸೋಜಾ, ಸ್ವಯಂ ಸೇವಕರು ಮತ್ತು ನವಜೀವನ ಸಮಿತಿ ಸದಸ್ಯರುಗಳು ಉಪಸ್ಥಿತರಿದ್ದರು.