ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರ ಜಾಗೃತಿ ಸೌಧದಲ್ಲಿ ನಡೆಯುತ್ತಿರುವ 245ನೇ ವಿಶೇಷ ಮದ್ಯವರ್ಜನ ಶಿಬಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮ ಪೂಜ್ಯ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಆಗಮಿಸಿ 67 ಮಂದಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಮದ್ಯವರ್ಜನ ಶಿಬಿರದ ಮೂಲಕ ಶಿಬಿರಾರ್ಥಿಗಳಿಗೆ ಪ್ರೇರಣೆ ಕೊಟ್ಟು ಮನಃಪರಿವರ್ತನೆ ಮಾಡಲಾಗುತ್ತಿದೆ, ಕೆಟ್ಟ ಅಭ್ಯಾಸಗಳು ಮನುಷ್ಯನನ್ನು ಸುಲಭವಾಗಿ ಅಂಟಿಕೊಳ್ಳುತ್ತದೆ ಆದರೆ ಅದನ್ನು ಬಿಡಲು ಕಷ್ಟ ಪಡಬೇಕಾಗುತ್ತದೆ. ದುಶ್ಚಟಕ್ಕೆ ಬಲಿಯಾದವರು ತನ್ನ ಕುಟುಂಬಕ್ಕೆ ಖರ್ಚು ಮಾಡುವ ಮತ್ತು ಪ್ರೀತಿ ತೋರಿಸುವ ಬದಲು ತನ್ನ ಸ್ನೇಹಿತರಿಗೆ ಹೆಚ್ಚು ಖರ್ಚು ಮತ್ತು ಪ್ರೀತಿ ಮಾಡುತ್ತಾರೆ. ಕುಡಿತದಿಂದ ಆರೋಗ್ಯ ಹಾಳಾಗುವುದರೊಂದಿಗೆ ಮನುಷ್ಯನ ಆಯುಷ್ಯ ಕಡಿಮೆಯಾಗುತ್ತದೆ. ದೃಢವಾದ ಸಂಕಲ್ಪದಿಂದ ಮತ್ತು ಮನಃಪರಿವರ್ತನೆಯಿಂದ ದುಶ್ಚಟ ದೂರ ಮಾಡಲು ಸಾಧ್ಯ. ತನ್ನಲ್ಲಿರುವ ಅಹಂಕಾರ ಹಾಗೂ ದುಶ್ಚಟ ದೂರ ಮಾಡಿದಾಗ ಮಾತ್ರ ಸಂಸಾರದಲ್ಲಿ ಹಾಗೂ ಸಮಾಜದಲ್ಲಿ ಒಬ್ಬ ವ್ಯಕ್ತಿ ಗೌರವಯುತವಾಗಿ ಬದುಕಲು ಸಾಧ್ಯ ಎಂದು ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಜನಜಾಗೃತಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಮಾನ್ಯ ಶ್ರೀ ವಿವೇಕ್ ವಿ. ಪಾಯಸ್, ಪೂಜ್ಯರ ಕಚೇರಿ ಪ್ರಬಂಧಕರಾದ ಶ್ರೀ ರಾಜೇಂದ್ರ ದಾಸ್, ಆಡಳಿತ ಯೋಜನಾಧಿಕಾರಿಗಳಾದ ಶ್ರೀ ಮಾಧವ ಗೌಡ, ಶಿಬಿರಾಧಿಕಾರಿಗಳಾದ ಶ್ರೀ ನಂದಕುಮಾರ್, ಶ್ರೀ ರಮೇಶ್, ಶ್ರೀ ದಿನೇಶ್, ಶ್ರೀ ನಾಗೇಂದ್ರ ಮತ್ತು ಆರೋಗ್ಯ ಸಹಾಯಕರಾದ ಶ್ರೀಮತಿ ಪ್ರೇಸಿಲ್ಲ ಡಿ’ಸೋಜಾ, ಶ್ರೀಮತಿ ನೇತ್ರಾವತಿ ಮತ್ತು ಶ್ರೀಮತಿ ಜಯಲಕ್ಷ್ಮಿ, ಆಪ್ತಸಮಾಲೋಚಕರಾದ ಶ್ರೀ ಜಿ. ಆರ್. ಮಧು ಮತ್ತು ಜಾಗೃತಿ ಸೌಧದ ಪ್ರಬಂಧಕರಾದ ಶ್ರೀ ಕಿಶೋರ್ ಉಪಸ್ಥಿತರಿದ್ದರು.
