247 ನೇ ವಿಶೇಷ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ಧರ್ಮಸ್ಥಳ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ ಇದರ ಸಹಭಾಗಿತ್ವದಲ್ಲಿ ಪರಮಪೂಜ್ಯ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾ|| ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ “ಜಾಗೃತಿಸೌಧ”ದಲ್ಲಿ 247 ನೇ ವಿಶೇಷ ಮದ್ಯವರ್ಜನ ಶಿಬಿರ ಉದ್ಘಾಟನೆಗೊಂಡಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಿಬಿರದ ವೈದ್ಯಾಧಿಕಾರಿ ಹಾಗೂ ಆರ್ಯಭಟ ಪ್ರಶಸ್ತಿ ಪುರಸ್ಕೃತ ವೈದ್ಯರಾದ ಡಾ. ಮೋಹನದಾಸ ಗೌಡ ಇವರು ನೆರವೇರಿಸಿದರು. ಶ್ರೀ ದಿವಾಕರ್ ಪೂಜಾರಿ ಶಿಬಿರಾಧಿಕಾರಿ ಜನಜಾಗೃತಿ ಪ್ರಾದೇಶಿಕ ವಿಭಾಗ ಬೆಳ್ತಂಗಡಿ ಇವರು ಜನಜಾಗೃತಿ ವೇದಿಕೆಯ ಹುಟ್ಟು, ಬೆಳವಣಿಗೆ, ನಡೆದು ಬಂದ ಹಾದಿ ಮತ್ತು ಅಸಾಮಾನ್ಯ ಸಾಧನೆಗಳ ಪರಿಚಯದೊಂದಿಗೆ ಪ್ರಾಸ್ತಾವಿಕ ಮಾತನಾಡಿ ಅತಿಥಿಗಳು, ಶಿಬಿರಾರ್ಥಿಗಳು ಮತ್ತು ಅವರ ಕುಟುಂಬದವರನ್ನು ಸ್ವಾಗತಿಸಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಮುಖೇಶ್ ಪ್ರಾದೇಶಿಕ ಯೋಜನಾಧಿಕಾರಿ ಜನಜಾಗೃತಿ ಪ್ರಾದೇಶಿಕ ವಿಭಾಗ ಮೈಸೂರು, ಶ್ರೀ ರಂಗಸ್ವಾಮಿ ಎ. ಟಿ. ಜಿಲ್ಲಾಧ್ಯಕ್ಷರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕೊಡಗು ಜಿಲ್ಲೆ, ಶ್ರೀ ಕಿಶೋರ್ ಪ್ರಬಂಧಕರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಜಾಗೃತಿ ಸೌಧ, ಆಪ್ತ ಸಲಹೆಗಾರರಾದ ಶ್ರೀ ಮಧು, ಶಿಬಿರಾಧಿಕಾರಿಗಳಾದ ಶ್ರೀ ನಂದಕುಮಾರ್ ಪಿ. ಪಿ., ಶ್ರೀ ವಿದ್ಯಾಧರ್, ಶ್ರೀ ದಿನೇಶ್ ಮರಾಠಿ, ಶ್ರೀ ನಾಗೇಂದ್ರ, ಶ್ರೀ ರಮೇಶ್ ಮತ್ತು ಶ್ರೀ ಜಯನಂದ ಆರೋಗ್ಯ ಸಹಾಯಕರಾದ ಕು. ರಂಜಿತಾ, ಶ್ರೀಮತಿ ಜಯಲಕ್ಷ್ಮಿ, ಶ್ರೀಮತಿ ನೇತ್ರಾವತಿ, ಶ್ರೀ ವೆಂಕಟೇಶ್ ಇವರುಗಳು ಉಪಸ್ಥಿತರಿದ್ದರು. ಕರ್ನಾಟಕ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸಿದ ವಿಶೇಷ ಶಿಬಿರದ ಶಿಬಿರಾರ್ಥಿಗಳು ಮತ್ತು ಅವರ ಕುಟುಂಬದ ಸದಸ್ಯರುಗಳು ಭಾಗವಹಿಸಿದ್ದರು. ವಿಶೇಷ ಶಿಬಿರಕ್ಕೆ ಆಗಮಿಸಿದ ಸಾಧಕ ನವಜೀವನ ಸಮಿತಿಯ ಸದಸ್ಯರುಗಳು ತಮ್ಮ ವೈಯಕ್ತಿಕ ಪರಿಚಯದೊಂದಿಗೆ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಸಂಶೋಧನಾ ಕೇಂದ್ರದ ಸಿಬ್ಬಂದಿಗಳು, ಸ್ವಯಂ ಸೇವಕರು ಮತ್ತು ನವಜೀವನ ಸಮಿತಿ ಸದಸ್ಯರುಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.