ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಕೊಪ್ಪಳ ಪಶ್ಚಿಮ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಜಿಲ್ಲಾ ಜನಜಾಗೃತಿ ವೇದಿಕೆ ಕೊಪ್ಪಳ, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಭಾಗ್ಯನಗರ ವಲಯ, ನಗರ ಪೊಲೀಸ್ ಠಾಣೆ, ಮಹಾನಗರ ಪಾಲಿಕೆ, ಆರೋಗ್ಯ ಇಲಾಖೆ ಮತ್ತು ಸ್ಥಳೀಯ ಸಂಘ ಸಂಸ್ಥೆಗಳು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ, ದಾನಿಗಳು, ಸಾರ್ವಜನಿಕರು ಹಾಗೂ ನವಜೀವನ ಸಮಿತಿ ಸದಸ್ಯರು ಇವರುಗಳ ಸಂಯುಕ್ತ ಆಶ್ರಯದಲ್ಲಿ 1581ನೇ ಮದ್ಯವರ್ಜನ ಶಿಬಿರ ಮೋಚಿ ಕ್ಷೇಮಾಭಿವೃದ್ಧಿ ಸಮಾಜದ ಸಮುದಾಯ ಭವನ ಭಾಗ್ಯನಗರದಲ್ಲಿ ಉದ್ಘಾಟನೆಗೊಂಡಿತು. ಪೂಜ್ಯ ಶ್ರೀ ರುದ್ರಮುನಿ ದೇವರು ನಿಯೋಜಿತ ಉತ್ತರಾಧಿಕಾರಿಗಳು ವಿರಕ್ತ ಮಠ ಯತ್ನಟ್ಟಿ ಇವರು ದಿವ್ಯ ಸಾನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಶಾರದಾ ರಾಘವೇಂದ್ರ ಅಧ್ಯಕ್ಷರು 1581ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಇವರು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ವೇದಿಕೆಯ ಎಲ್ಲಾ ಗಣ್ಯರು ಸಾಮೂಹಿಕವಾಗಿ ನೆರವೇರಿಸಿರುತ್ತಾರೆ. ಶ್ರೀ ಮಾಧವ ನಾಯಕ್ ಯೋಜನಾಧಿಕಾರಿ ಜನಜಾಗೃತಿ ವೇದಿಕೆ ಕೊಪ್ಪಳ ಪ್ರಾದೇಶಿಕ ವಿಭಾಗ ಇವರು ಕಾರ್ಯಕ್ರಮದ ಕುರಿತು ಪ್ರಸ್ತಾವಿಕ ಮಾತುಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ಶ್ರೀ ಸದಾನಂದ ಬಂಗೇರ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಕೊಪ್ಪಳ ಇವರು ಮಾಹಿತಿ ನೀಡಿ ಶುಭವನ್ನು ಕೋರಿದರು. ವೇದಿಕೆಯಲ್ಲಿ ಅತಿಥಿಗಳಾಗಿ ಶ್ರೀ ಶ್ರೀನಿವಾಸ ಗುಪ್ತಾ ಅಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ಕೊಪ್ಪಳ, ಶ್ರೀ ಯಮನಪ್ಪ ಕಬ್ಬೇರ್ ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರು ಕೊಪ್ಪಳ, ಶ್ರೀ ಪ್ರಾಣೇಶ್ ಮಹೇಂದ್ರಕರ್ ಮಾಜಿ ನಗರಸಭೆ ಸದಸ್ಯರು ಕೊಪ್ಪಳ, ಶ್ರೀ ದಾನಪ್ಪ ಕವಲೂರು ಗೌರವಾಧ್ಯಕ್ಷರು ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಶ್ರೀಮತಿ ಸುಜಾತ ಪಟ್ಟಣ ಶೆಟ್ಟಿ lNNER ವಿಲ್ ಕ್ಲಬ್ ಸದಸ್ಯರು ಕೊಪ್ಪಳ, ಶ್ರೀ ಸುರೇಶ್ ದರಗದಕಟ್ಟಿ ಮಾಜಿ ಪಟ್ಟಣ ಪಂಚಾಯತ್ ಸದಸ್ಯರು ಭಾಗ್ಯನಗರ, ಶ್ರೀ ಚಂದ್ರು ಉಂಕಿ ಮಾಜಿ ಗ್ರಾಮ ಪಂಚಾಯತ್ ಸದಸ್ಯರು ಭಾಗ್ಯನಗರ, ಶ್ರೀ ಗವಿಸಿದ್ದಪ್ಪ ಮಗಿಮಾವಿನಹಳ್ಳಿ ಪಟ್ಟಣ ಪಂಚಾಯತ್ ಸದಸ್ಯರು ಭಾಗ್ಯನಗರ, ಶ್ರೀ ಸಿದ್ದಪ್ಪ ಯಮನಪ್ಪ ಹೊಸ್ಕೇರಿ ಗ್ರಾಮ ಪಂಚಾಯತ್ ಸದಸ್ಯರು ಚಿಲವಾಡಗಿ, ಶ್ರೀಮತಿ ಶಾರದಾ ಮಂಜುನಾಥ ತಾವರಗೇರ ಸಹ ಕಾರ್ಯದರ್ಶಿ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಶ್ರೀ ಯಮನೂರಪ್ಪ ಹಾದಿಮನಿ, ಬಿಜೆಪಿ ಯುವ ಮುಖಂಡರು ಭಾಗ್ಯನಗರ, ಶ್ರೀ ನಂದಕುಮಾರ್ ಪಿ ಪಿ ಶಿಬಿರಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಶ್ರೀಮತಿ ಸೌಮ್ಯ ಆರೋಗ್ಯ ಸಹಾಯಕಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಇವರುಗಳು ಉಪಸ್ಥಿತರಿದ್ದರು. ಶ್ರೀಮತಿ ಲಕ್ಷ್ಮೀ ಮೇಲ್ವಿಚಾರಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಭಾಗ್ಯನಗರ ವಲಯ, ಸೇವಾಪ್ರತಿನಿಧಿಗಳು ಭಾಗ್ಯನಗರ ವಲಯ, ಮತ್ತು ಒಕ್ಕೂಟದ ಪದಾಧಿಕಾರಿಗಳು, ನವಜೀವನ ಸಮಿತಿ ಸದಸ್ಯರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.ಶ್ರೀ ಜಗದೀಶ್ ಕೆ.ಹೆಚ್ ಯೋಜನಾಧಿಕಾರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಕೊಪ್ಪಳ ಪಶ್ಚಿಮ ಇವರು ಕಾರ್ಯಕ್ರಮವನ್ನು ಸ್ವಾಗತಿಸಿ ನಿರೂಪಿಸಿ ವಂದಿಸಿದರು.
