ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಶ್ರೀ ದುರ್ಗಾ ಸಭಾಭವನದಲ್ಲಿ ನಡೆಯುತ್ತಿರುವ 1594 ನೇ ಮದ್ಯವರ್ಜನ ಶಿಬಿರದ 8 ನೇ ದಿನದಲ್ಲಿ ಕುಟುಂಬ ದಿನ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಉಡುಪಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿಗಳಾದ ಶ್ರೀ ಯುತ ತಿಮ್ಮಯ್ಯ ನಾಯ್ಕ್ ರವರು ನಡೆಸಿಕೊಟ್ಟರು, ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ವಿಠ್ಠಲ ಶೆಟ್ಟಿ, ಜನಜಾಗೃತಿ ವೇದಿಕೆ ಬ್ರಹ್ಮಾವರ, ಉಡುಪಿ ತಾಲೂಕು ಅಧ್ಯಕ್ಷರಾದ ಶ್ರೀಯುತ ಅಚ್ಚುತ್ತ ಪೂಜಾರಿ, ವಲಯದ ಮೇಲ್ವಿಚಾರಕರಾದ ಶ್ರೀ ಅಜಿತ್, ಎಲ್ಲಾ ಸೇವಾ ಪ್ರತಿನಿಧಿಗಳು, ಶೌರ್ಯ ವಿಪತ್ತು ತಂಡದ ಸದಸ್ಯರು,ಎಲ್ಲಾ ನವಜೀವನ ಬಂಧುಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನೆರವೇರಿತು.
