ಪಾನಮುಕ್ತ ನವ ಜೀವನ ಸದಸ್ಯರಿಗೆ ಸ್ವಉದ್ಯೋಗ ತರಬೇತಿ ಕಾರ್ಯಗಾರದ ಸಮಾರೋಪ ಸಮಾರಂಭ

Janajagurthi Vedike News

ಛಲ ಬಲ ಹಂಬಲವಿದ್ದರೆ ಸಾಧನೆಗೆ ಅಸಾಧ್ಯವಾದುದು ಯಾವುದು ಇಲ್ಲ – ಸಾಯಿ ಅಚ್ಚುತ ಹೌಸಿಂಗ್ ಸಂಸ್ಥಾಪಕ ಚಂದ್ರಶೇಖರ ಎಂ.ಪಿ ಅಭಿಮತ ತುಮಕೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬೆಂಗಳೂರು ಪ್ರಾದೇಶಿಕ ವಿಭಾಗ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ತುಮಕೂರು ಜಿಲ್ಲೆ ಹಾಗೂ ಭಾರತೀಯ ಸ್ಟೇಟ್ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ತುಮಕೂರು ಇದರ ಸಂಯುಕ್ತ ಆಶ್ರಯದಲ್ಲಿ ಮದ್ಯವರ್ಜನ ಶಿಬಿರದಲ್ಲಿ ಭಾಗವಹಿಸಿ ಪಾನಮುಕ್ತರಾದ ನವ ಜೀವನ ಸಮಿತಿ ಸದಸ್ಯರಿಗೆ ವಿಶೇಷವಾಗಿ ಆರು ದಿನಗಳ ಉದ್ಯಮಶೀಲತಾ ತರಬೇತಿ ಕಾರ್ಯಗಾರವನ್ನು Rseti ಯಲ್ಲಿ ಸಮಾರೋಪಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷರಾದ ಶ್ರೀ ಅಮರನಾಥ ಶೆಟ್ಟಿ ರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಾಯಿ ಅಚ್ಚುತ ಹೌಸಿಂಗ್ ತುಮಕೂರು ಇದರ ಸಂಸ್ಥಾಪಕರಾದ ಶ್ರೀ ಚಂದ್ರಶೇಖರ್ ರವರು ಭಾಗವಹಿಸಿ ನಮ್ಮಲ್ಲಿ ಛಲ ಬಲ ಹಂಬಲವಿದ್ದರೆ ಸಾಧನೆಗೆ ಅಸಾಧ್ಯವಾದುದು ಯಾವುದು ಇಲ್ಲ ಎಂದು ಜೀರೋ ಆಗಿದ್ದ ವ್ಯಕ್ತಿ ಇಂದು ಹೀರೋ ಆಗಲು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜನಜಾಗೃತಿ ವೇದಿಕೆಯೆ ಕಾರಣ ಎಂದು ತಮ್ಮ ಅನುಭವಗಳನ್ನು ಹಂಚಿಕೊಂಡರು. ಬೆಂಗಳೂರು ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆ ಯೋಜನಾಧಿಕಾರಿ ಶ್ರೀ ಗಣೇಶ್ ಆಚಾರ್ಯ ರವರು ಕಾರ್ಯಕ್ರಮದ ಬಗ್ಗೆ ಹಾಗೂ ಪರಮಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಯೋಜನೆಗಳ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿದರು. ಜನಜಾಗೃತಿ ವೇದಿಕೆಯ ಸದಸ್ಯರಾದ ಶ್ರೀಮತಿ ವಿಜಯ ಭಾಸ್ಕರ್ ರವರು, ಶ್ರೀಮತಿ ಮಂಜುಳ ಚಂದ್ರಶೇಖರ್ ರವರು ಅತಿಥಿಗಳಾಗಿ ಭಾಗವಹಿಸಿದ್ದರು. ಆರು ದಿನಗಳ ತರಬೇತಿ ಕಾರ್ಯಗಾರವನ್ನು Rseti ಯ ನಿರ್ದೇಶಕರಾದ ಅರುಣ್ ಕುಮಾರ್ ರವರ ಮಾರ್ಗದರ್ಶನದಲ್ಲಿ ಉಪನ್ಯಾಸಕರಾದ ಶ್ರೀಮತಿ ರಮ್ಯ ಹಾಗೂ ಪ್ರದೀಪ್ ರವರು ನೆರವೇರಿಸಿದರು. ಕಾರ್ಯಕ್ರಮದ ನಿರ್ವಹಣೆಯನ್ನು ಶಿಬಿರಾರ್ಥಿ ಲವಕುಮಾರ್ ನೆರವೇರಿಸಿದರು. ನವ ಜೀವನ ಸಮಿತಿ ಸದಸ್ಯರಾದ ಶ್ರೀ ಮಹೇಶ್ ರವರ ಸ್ವಾಗತಿಸಿದರು. ಚಂದ್ರಶೇಖರ್ ರವರು ವಂದಿಸಿದರು. ಸಮಾರಂಭದಲ್ಲಿ ಶಿಬಿರಾರ್ಥಿಗಳಾದ ಶ್ರೀ ರಘು, ನಾಗರಾಜ್, ಸಂಪತ್ ಮತ್ತಿತರು ತಮ್ಮ ಅನುಭವವನ್ನು ಹಂಚಿಕೊಂಡರು. ಈ ಸಂದರ್ಭ ಭಾಗವಹಿಸಿದವರಿಗೆ ಪ್ರಮಾಣ ಪತ್ರ ನೀಡಲಾಯಿತು.ತರಬೇತಿ ಕಾರ್ಯಗಾರದಲ್ಲಿ ಒಟ್ಟು 30 ಜನ ನವಜೀವನ ಸಮಿತಿ ಸದಸ್ಯರು ಶಿಬಿರಾರ್ಥಿಗಳಾಗಿ ಭಾಗವಹಿಸಿದ್ದರು.