ಹರಿಹರ ವಲಯದ ಭೀಮನಗರ ಕಾರ್ಯಕ್ಷೇತ್ರದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ

Janajagurthi Vedike News

ಹರಿಹರ ವಲಯದ ಭೀಮನಗರ ಕಾರ್ಯಕ್ಷೇತ್ರದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಗೌರವಾನ್ವಿತ ಜಿಲ್ಲಾ ನಿರ್ದೇಶಕರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ದುಶ್ಚಟಗಳಿಂದ ಕುಟುಂಬದ ಮೇಲೆ ಆಗುವ ದುಷ್ಪರಿಣಾಮವನ್ನು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಜನಜಾಗೃತಿ ಅದ್ಯಕ್ಷರಾದ ಬಾಬಣ್ಣ, ಸಂಪನ್ಮೂಲ ವ್ಯಕ್ತಿ ಶ್ವೇತಾ, ಈಶ್ವರ ತಾಲೂಕಿನ ಮಾನ್ಯ ಯೋಜನಾಧಿಕಾರಿಗಳು, ವಲಯದ ಮೇಲ್ವಿಚಾರಕರು, ಜ್ಞಾನವಿಕಾಸ ಸಮನ್ವಯ ಅಧಿಕಾರಿ, ಒಕ್ಕೂಟ ಪದಾಧಿಕಾರಿಗಳು, ಸೇವಾ ಪ್ರತಿನಿಧಿ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.