ನರಸಾಪುರ ವಲಯದ ನರಸಾಪುರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಗೌರವಾನ್ವಿತ ಜಿಲ್ಲಾ ನಿರ್ದೇಶಕರಾದ ಶ್ರೀ ಲವಕುಮಾರ್, ಯೋಜನಾಧಿಕಾರಿಗಳಾದ ಶ್ರೀ ಸತೀಶ್, ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ರಾಜೇಂದ್ರ ಮತ್ತು ಶಾಲೆಯ ಶಿಕ್ಷಕರು ಶಾಲಾ ಮಕ್ಕಳಿಗೆ ದುಶ್ಚಟಗಳಿಂದ ದೂರವಿರಲು ಮಾಹಿತಿ ಮಾರ್ಗದರ್ಶನ ನೀಡಿದರು.
