ಹುಕ್ಕೇರಿ ತಾಲ್ಲೂಕಿನ ಬಸ್ತವಾಡ ಗ್ರಾಮದ ಶ್ರೀಕಾಡ ಸಿದ್ಧೇಶ್ವರ ದೇವಸ್ಥಾನದ ಸಭಾಭವನದಲ್ಲಿ, ಇಂದು 1972 ನೇ ಮದ್ಯವರ್ಜನ ಶಿಬಿರ ಪ್ರಾರಂಭವಾಯಿತು.ಶಿಬಿರದ ಉದ್ಘಾಟನೆಯನ್ನು ಹುಕ್ಕೇರಿ ಹಿರೇಮಠದ ಪರಮ ಪೂಜ್ಯ ಶ್ರೀ ಶ. ಬ್ರ.ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಕಾರ್ಯಕ್ರಮವನ್ನು ಉದ್ದೇಶಿಸಿ ಜನಜಾಗೃತಿ ಯೋಜನಾಧಿಕಾರಿ ಶ್ರೀ ಭಾಸ್ಕರ್ ಪ್ರಾಸ್ತವಿಕ ನುಡಿಗಳನ್ನಾಡಿದರು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪರಮಪೂಜ್ಯ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳು ಹಸಿದವರಿಗೆ ಅನ್ನ ನೀಡುವ, ಅನಾರೋಗ್ಯದಿಂದ ಬಳಲಿದವರಿಗೆ ಔಷಧ ನೀಡುವ, ವಸ್ತ್ರ ದಾನ ಮಾಡುವ, ಸಹಾಯ ಕೇಳಿ ಬಂದವರಿಗೆ ಅಭಯ ನೀಡುವ ದೇಶದ ಶ್ರದ್ಧಾ …
ಚಿಕ್ಕೋಡಿ -ಅಥಣಿ ಜಿಲ್ಲಾ ಜನಜಾಗೃತಿ ವೇದಿಕೆಯ ತ್ರೈಮಾಸಿಕ ಮಹಾಸಭೆಯ ದೀಪ ಪ್ರಜ್ವಲನೆ.
ಚಿಕ್ಕೋಡಿ /ಅಥಣಿ ಜಿಲ್ಲಾ ಜನಜಾಗೃತಿ ವೇದಿಕೆಯ ತ್ರೈಮಾಸಿಕ ಮಹಾಸಭೆ. ಈ ದಿನ ಚಿಕ್ಕೋಡಿ ನಗರದ ವಾಲ್ಮೀಕಿ ಸಭಾಭವನದಲ್ಲಿ ಚಿಕ್ಕೋಡಿ /ಅಥಣಿ ಜಿಲ್ಲಾ ಜನಜಾಗೃತಿ ವೇದಿಕೆಯ ತ್ರೈಮಾಸಿಕ ಮಹಾಸಭೆ ನಡೆಯಿತು…ಸಭೆಯಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಕಾರ್ಯದರ್ಶಿ ಶ್ರೀಮತಿ ನಾಗರತ್ನ ಹೆಗಡೆ ಎಲ್ಲಾ ಗೌರವಾನ್ವಿತ ಪದಾಧಿಕಾರಿಗಳನ್ನು ಸ್ವಾಗತಿಸಿದರು,ಜನಜಾಗೃತಿ ಯೋಜನಾಧಿಕಾರಿ ಶ್ರೀ ಭಾಸ್ಕರ್ ಏನ್ ಪ್ರಾಸ್ತಾವಿಕ ನುಡಿಗಳಾಡಿದರು.ಬೆಳಿಗ್ಗೆ 11 ಗಂಟೆಗೆ ಸರಿಯಾಗಿ ಸಭೆ ಪ್ರಾರಂಭವಾಗಿ ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀ ವಿಠ್ಠಲ್ ಸಾಲಿಯಾನ್ ರವರು, ಗತ ಸಭೆಯ ವರದಿಯನ್ನು ಮಂಡಿಸಿ,ಚಿಕ್ಕೋಡಿ ಜಿಲ್ಲೆಯ ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳ ಅನುಷ್ಠಾನ ವರದಿಯನ್ನು ಮಂಡಿಸಿದರು.ಚಿಕ್ಕೋಡಿ …
ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದ ಸಮಾರೋಪ ಸಮಾರಂಭ
ವಿಟ್ಲ ತಾಲೂಕಿನ ವಿಟ್ಲ ವಲಯದ ವಿಠಲ ಪದವಿಪೂರ್ವ ಕಾಲೇಜ್ ನಲ್ಲಿ ವಿಟ್ಲ ತಾಲೂಕಿನ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್ ಮಾತನಾಡಿ ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ಅತೀ ಹೆಚ್ಚು ವ್ಯಸನಗಳಿಗೆ ಬಲಿಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತ ಪಡಿಸಿ. ಇದಕ್ಕೆ ಕಾರಣಗಳು ಬಗ್ಗೆ ವಿವರಣೆ ನೀಡಿದರು. ವ್ಯಸನಗಳಿಂದ ದೂರವಿರಲು ಬೇಕಾದ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಠಲ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಮುಳಿಯ ತಿರುಮಲೇಶ್ವರ ಭಟ್ ವಹಿಸಿದ್ದರು. ವೇದಿಕೆಯಲ್ಲಿ …
ಹಿರೇಬಾಗೇವಾಡಿಯಲ್ಲಿ ಸಮಾಲೋಚನಾ ಸಭೆ
ಹಿರೇ ಬಾಗೇವಾಡಿ ಯೋಜನಾ ವ್ಯಾಪ್ತಿಯ ಸಂಪಗಾವ ವಲಯದ ಗ್ರಾಮದಲ್ಲಿ ಮಧ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ರಚನೆ ಮತ್ತು ಶಿಬಿರದ ಪೂರ್ವಭಾವಿ ಸಭೆಯನ್ನು ಶ್ರೀ ಬೈಲಬಸ್ವೇಶ್ವರ ಕಲ್ಯಾಣ ಮಂದಿರದಲ್ಲಿ ಆಯೋಜನೆಯನ್ನ ಮಾಡಿದ್ದು ಗ್ರಾಮ ಪಂಚಾಯತ್ ಅಧ್ಯಕ್ಷರು ಸದಸ್ಯರು ಗಣ್ಯರು ಊರಿನ ಹಿರಿಯರು ಸಭೆಯಲ್ಲಿ ಉಪಸ್ಥಿತರಿದ್ದು ಮಧ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರನ್ನಾಗಿ ಸಾತಪ್ಪ ಟೊಣ್ಣಿ ಯವರನ್ನು ಆಯ್ಕೆ ಮಾಡಿ ಗೌರವ ಅಧ್ಯಕ್ಷರನ್ನಾಗಿ ಉಮಾ ಬುಲಾಕೆ ಯವರನ್ನು ಉಪಾಧ್ಯಕ್ಷರಾಗಿ ಸಿಕಂದರ್ ತಾಳಿಕೋಟಿ, ಅನಿಲ್ ನೇಸರಗಿ, ಲಕ್ಷ್ಮಿ ಉಳವಿ ಕೋಶಾಧಿಕಾರಿಯನ್ನಾಗಿ ಬಸವರಾಜ್ ಉಳ್ಳಾಗಡ್ಡಿ ಗೌರವ ಸಲಹೆಗಾರರು ಸುರೇಶ್ ಕುರುಬರ, …
1972ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ದೊಡ್ಡಬಳ್ಳಾಪುರ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಕಂಟನಕುಂಟೆ ವಲಯ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟಗಳು ದೊಡ್ಡಬಳ್ಳಾಪುರ, ಪುಷ್ಪಾಂಡಜ ಮಹರ್ಷಿ ಆಶ್ರಮ ತಪಸೀಹಳ್ಳಿ, ನವಜೀವನ ಸಮಿತಿಗಳು ದೊಡ್ಡಬಳ್ಳಾಪುರ ತಾಲ್ಲೋಕು ಇವರ ಸಂಯುಕ್ತ ಆಶ್ರಯದಲ್ಲಿ ಪರಮಪೂಜ್ಯ ರಾಜರ್ಷಿ ಡಾII ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು …
ವಿದ್ಯಾರ್ಥಿ ದೆಸೆಯಲ್ಲಿ ತಲೆತಗ್ಗಿಸಿ ಪುಸ್ತಕ ನೋಡಿದರೆ ಮುಂದೆ ಬದುಕಿನಲ್ಲಿ ತಲೆ ಎತ್ತಿ ನಡೆಯ ಬಹುದು : ಶ್ರೀಮತಿ ದಯಾಶೀಲ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಹಾವೇರಿ ಅಗಡಿ ವಲಯದ ಗಾಂಧಿಪುರ ಕಾರ್ಯಕ್ಷೇತ್ರದ ಪದವಿ ಕಾಲೇಜಿನಲ್ಲಿ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಧರ್ಮಸ್ಥಳದ ವತಿಯಿಂದ ಗಾಂಧಿಪುರ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಶ್ರೀಮತಿ ದಯಶೀಲ ಪ್ರಾದೇಶಿಕ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಧಾರವಾಡ ಇವರು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ವಿಚಾರಗಳು ಮತ್ತು ವೈಯಕ್ತಿಕ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಸಂಗತಿಗಳ ಬಗ್ಗೆ ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ …
1970ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ
ಬೆಂಗಳೂರು ಪ್ರಾದೇಶಿಕ ವಿಭಾಗದ ತುಮಕೂರು-1 ಜಿಲ್ಲೆಯ ತುಮಕೂರು ಯೋಜನಾಕಛೇರಿ ವ್ಯಾಪ್ತಿಯ ಹೊಳಕಲ್ಲು ಕಾರ್ಯಕ್ಷೇತ್ರದ ಶ್ರೀ ನಂಜುಂಡೇಶ್ವರ ಕಲ್ಯಾಣಮಂಟಪದಲ್ಲಿ ನಡೆಯುತ್ತಿರುವ 1970ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಬೆಂಗಳೂರು ಪ್ರಾದೇಶಿಕ ವಿಭಾಗದ ಗೌರವಾನ್ವಿತ ಮಾನ್ಯ ಪ್ರಾದೇಶಿಕ ನಿರ್ದೇಶಕರಾದ ಸನ್ಮಾನ್ಯ ಶ್ರೀ ಶೀನಪ್ಪ.ಎಂ ಸರ್ ರವರು ಕುಡಿತದ ಚಟದಿಂದ ಕಳೆದು ಕೊಂಡಂತಹ ಹಣ ಮತ್ತು ನೆಮ್ಮದಿಯನ್ನು ಕಳೆದುಕೊಂಡಂತಹ ಜಾಗದಲ್ಲಿಯೇ ಉಡುಕುವಂತಹ ಕೆಲಸವಾಗಬೇಕು ಆದ್ದರಿಂದ ನೀವು ಮದ್ಯಪಾನವನ್ನು ತ್ಯಜಿಸುವ ಮೂಲಕ ಪಾನಮುಕ್ತಜೀವನವನ್ನು ನಡೆಸಬೇಕೆಂದು ತಿಳಿಸಿದರು. ಮಹಾತ್ಮ ಗಾಂಧೀಜಿಯವರು ಅಂದು ಕಂಡಂತಹ ರಾಮರಾಜ್ಯದ ಕನಸ್ಸನ್ನು ಇಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ …









