ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Janajagurthi Vedike Uncategorized

ಹೊಸಹಳ್ಳಿ ತಾಲೂಕಿನ ಕೆರೆ ಗೋಡು ವಲಯದ ಶ್ರೀ ಮಾಧವ ವಿದ್ಯಾಲಯದ ಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ನಡೆಸಲಾಯಿತು ಜನ ಜಾಗೃತಿ ಸದಸ್ಯರಾದ ಶ್ರೀ ಮಹದೇವ್ ಕಾರಸ ವಾಡಿ, ಶಾಲೆಯ ಕೋಶಾಧಿಕಾರಿ ಶ್ರೀ ರವಿ, ಕಾರ್ಯದರ್ಶಿ ಯಾದ ಶ್ರೀ ಕುಮಾರ್, ಒಕ್ಕೂಟದ ಅಧ್ಯಕ್ಷರಾದ ಸುಮಿತ್ರ ಭಾಗವಹಿಸಿದ್ದರು ಸದಸ್ಯರಾದ ಶ್ರೀ ಮಹದೇವು ಕಾರಸ ವಾಡಿ ರವರು ಮಕ್ಕಳಿಗೆ ದುಶ್ಚಟ ದಿಂದ ಆಗುವ ಸಮಸ್ಯೆ ಗಳು, ಸ್ವಸ್ಥ ಸಮಾಜ ನಿರ್ಮಾಣ ಮಾಡುವಲ್ಲಿ ಮಕ್ಕಳ ಪಾತ್ರ, ಜನ ಜಾಗೃತಿ ಕಾರ್ಯಕ್ರಮ ಗಳ ಬಗ್ಗೆ ಮಾಹಿತಿ ನೀಡಿದರು 🙏🙏

1943ನೇ ಮದ್ಯವರ್ಜನ ಶಿಬಿರದ ಸಮಾರೋಪ

Janajagurthi Vedike Uncategorized

ಹಾಸನ ಜಿಲ್ಲೆಯ ಬಾಣಾವರದ 1943ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶ್ರೀ ಶ್ರೀ ಶ್ರೀ ಜಯಚಂದ್ರಶೇಖರ ಸ್ವಾಮಿಯವರು, ಕೇದಿಗೆ ಮಠ, ಕೋಳಗುಂದ ಇವರಿಂದ ಶುಭಾಶೀರ್ವಾದ

ನಶೆ ಮುಕ್ತ ಭಾರತ

Janajagurthi Vedike Uncategorized

ಸರಕಾರಿ ಪಾಲಿಟೆಕ್ನಿಕ್ ಕಾಲೇಜು, ಕಾರ್ಕಳ ಇಲ್ಲಿನ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಇಂದು ನಡೆಯಿತು. “ನಶೆ ಮುಕ್ತ ಭಾರತ ” ಎನ್ನುವ ವಿಷಯವಾಗಿ ಜನಜಾಗೃತಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿ. ಪಾಯ್ಸ್ ರವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಕಾಲೇಜು ಪ್ರಾಂಶುಪಾಲರಾದ ಶ್ರೀಯುತ ಕುಮಾರ್ ಮತ್ತು ಕಾಲೇಜು ಪ್ರಾಧ್ಯಾಪಕರು ಉಪಸ್ಥಿತರಿದ್ದರು. ಸುಮಾರು 200 ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಾಮನಗರ ತಾಲ್ಲೂಕು,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಿ ಇ ಎನ್ ಪೊಲೀಸ್ ಠಾಣೆ ರಾಮನಗರ ಸಹಯೋಗದಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆ ಹುಣಸೆದೊಡ್ಡಿಯಲ್ಲಿ ನಡೆಸಲಾಯಿತು.ಕಾರ್ಯಕ್ರಮ ಉದ್ಘಾಟನೆಯನ್ನು ಸವಿತಾ ಪಿ ಆರ್. ಹಿರಿಯ ಸಿವಿಲ್ ನ್ಯಾಯಾದೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಾಡಿದರು. ದುಶ್ಚಟ ಮುಕ್ತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ, ಮಾದಕ ವಸ್ತು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಮತ್ತು ಕಾನೂನಿನಲ್ಲಿ ಶಿಕ್ಷೆಯ ಪ್ರಮಾಣ ಬಗ್ಗೆ …

1947ನೇ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike Uncategorized

ಸವದತ್ತಿ ತಾಲೂಕಿನಲ್ಲಿ ದಿನಾಂಕ : 08.07.2025 ರಿಂದ 15.07.2025 ರವರೆಗೆ ನಡೆಯುವ 1947ನೇ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಉದ್ಘಾಟಕರಾಗಿ ಆಗಮಿಸಿದ ರಾಜಕೀಯ ಧುರೀಣರಾದ ಶ್ರೀ ವಿರೂಪಾಕ್ಷಪ್ಪ ಮಾವನಿಯವರು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅಧ್ಯಕ್ಷತೆಯನ್ನು ಜಿಲ್ಲಾ ಜನ ಜಾಗೃತಿ ವೇದಿಕೆ ಅಧ್ಯಕ್ಷರಾದ ಶ್ರೀ ಸುಭಾಷ್ ಹನಸಿ ವಹಿಸಿದ್ದರು. ಕಾರ್ಯಕ್ರಮದಲ್ಲಿ PSI ಶ್ರೀ ಕಲ್ಮೇಶ್ ಬನ್ನೂರು, THO ಶ್ರೀ ಶ್ರೀಪಾದ್ ಸಬನಿಸ್, ವ್ಯವಸ್ಥಾಪನಾ ಸಮಿತಿ ಗೌರವಾಧ್ಯಕ್ಷರಾದ ಶ್ರೀ ಪಂಚನಗೌಡ ದ್ಯಾಮನಗೌಡರ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಪ್ರವೀಣ ಪಟ್ಟಣಶೆಟ್ಟಿ, ವ್ಯವಸ್ಥಾಪನಾ ಸಮಿತಿ ಉಪಾಧ್ಯಕ್ಷರಾದ ಶ್ರೀಮತಿ …

251 ನೇ ವಿಶೇಷ ಮಧ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike Uncategorized

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನ ಕೇಂದ್ರ ಲಾಯಿಲ ಜಾಗೃತಿ ಸೌಧದಲ್ಲಿ ನಡೆದ 251 ನೇ ವಿಶೇಷ ಮಧ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಇಂದು ನೆರವೇರಿತು,ಜನ ಜಾಗೃತಿಯ ಪ್ರಾದೇಶಿಕ ನಿರ್ದೇಶಕರಾದ ಗೌರವಾನ್ವಿತ ವಿವೇಕ್ ವಿನ್ಸೆಂಟ್ ಪಾಯಸ್ ರವರು ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾಹಿತಿ ನೀಡುತ್ತಾ ಜನಜಾಗೃತಿ ವೇದಿಕೆ ಬೆಳೆದುಕೊಂಡು ಬಂದ ಹಾದಿ ಹಾಗೂ ಈ ಮಧ್ಯವರ್ಜನ ಶಿಬಿರದ ವ್ಯವಸ್ಥೆಯ ಬಗ್ಗೆ, ಮಧ್ಯಪಾನದಿಂದ ಆಗುವ ಅನಾಹುತದ ಕುರಿತು ಒಬ್ಬ ವ್ಯಕ್ತಿಯ ಮೇಲೆ ವ್ಯಸನದಿಂದ ಉಂಟಾಗುವ ಪರಿಣಾಮ,ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯರು ಮಾಡುತ್ತಿರುವ ಸಮಾಜ ಸೇವೆ …

ಆನೇಕಲ್ ಮದ್ಯವರ್ಜನ ಶಿಬಿರ ಉದ್ಘಾಟನಾ ಸಮಾರಂಭ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾII ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ.ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ, 1944ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅತ್ತಿಬೆಲೆ ವಲಯ ಇವರ ಆಶ್ರಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಆನೇಕಲ್ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಂಗಳೂರು ಗ್ರಾಮಾಂತರ ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ ಇದರ ವಿಸ್ತರಣಾ …

ಬೀದರ್ ಜಿಲ್ಲಾ ಜನಜಾಗೃತಿ ವೇದಿಕೆಯ ಪದಾದಿಕಾರಿಗಳ 2025-26ನೇ ಸಾಲಿನ ಪ್ರಥಮ ಸಭೆ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೀದರ್ ಜಿಲ್ಲೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೀದರ್ ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ಬೀದರ್ ಜಿಲ್ಲಾ ಜನಜಾಗೃತಿ ವೇದಿಕೆಯ ಪದಾದಿಕಾರಿಗಳ 2025-26ನೇ ಸಾಲಿನ ಪ್ರಥಮ ಸಭೆಯನ್ನು ಬೀದರ್ ಜಿಲ್ಲಾ ಕಛೇರಿ ಸಭಾಂಗಣದಲ್ಲಿ ನಡೆಸಲಾಯಿತು.ಬೀದರ್ ತಾಲೂಕಿನ ಯೋಜನಾಧಿಕಾರಿಗಳಾದ ಶ್ರೀ ದರ್ಮೆಂದ್ರ ರವರು ಕಾರ್ಯಕ್ರಮದಲ್ಲಿ ಹಾಜರಿದ್ದ ಸರ್ವರಿಗೂ ಸ್ವಾಗತವನ್ನು ಬಯಸಿದರು.ಕಾರ್ಯಕ್ರಮವನ್ನು ಕಲಬುರ್ಗಿ ಪ್ರಾದೇಶಿಕ ನಿರ್ದೇಶಕರು ದಿನೇಶ್ ಪೂಜಾರಿ. ಜನಜಾಗೃತಿ ವೇದಿಕೆ ಅಧ್ಯಕ್ಷರು ವಿರೂಪಾಕ್ಷ ಗಾದಾಗಿ ಹಾಗೂ ಜಿಲ್ಲಾ ಕಾರ್ಯದರ್ಶಿ ಮುರುಳಿಧರ್ ಹೆಚ್. …

1942ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ

Janajagurthi Vedike Uncategorized

ಬೆಂಗಳೂರು ಪ್ರಾದೇಶಿಕ ವಿಭಾಗದ ತುಮಕೂರು-2 ಜಿಲ್ಲೆಯ ಚಿಕ್ಕನಾಯಕನಹಳ್ಳಿ ಯೋಜನಾ ಕಛೇರಿವ್ಯಾಪ್ತಿಯ ಸಾದರಹಳ್ಳಿ ಕಾರ್ಯ ಕ್ಷೇತ್ರದ ಶ್ರೀ ಲಕ್ಷ್ಮಿರಂಗನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ 1942ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಬೆಂಗಳೂರು ಪ್ರಾದೇಶಿಕ ವಿಭಾಗದ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರಾದ ಶ್ರೀಯುತ ಶೀನಪ್ಪ ಎಂ ಸರ್ ರವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಾರ್ಯಕ್ರಮಗಳು ಹಾಗೂ ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳಬಗ್ಗೆ ಮತ್ತು ಶಿಬಿರಕ್ಕೆ ಸೇರಿ ಪಾನಮುಕ್ತರಾಗಿ ಸಾಧನೆ ಮಾಡಿರುವಂತಹ ನವಜೀವನ ಸಮಿತಿ ಸದಸ್ಯರ ಯಶೋಗಾಥೆಗಳಬಗ್ಗೆ ತಿಳಿಸಿ ಶಿಬಿರಾರ್ಥಿಗಳು ಹಾಗೂ ಶಿಬಿರಾರ್ಥಿಗಳ ಕುಟುಂಬಸ್ಥರಿಗೆ ಮಾಹಿತಿ ಮತ್ತು …