ಶ್ರೀ ಧರ್ಮಸ್ಥಳ ಸೇವಾ ವಿಪತ್ತು ನಿರ್ವಹಣಾ ಘಟಕದಿಂದ ಶಾಲಾ ಮೈದಾನದಲ್ಲಿ ಗಿಡ ನಾಟಿ ಕಾರ್ಯಕ್ರಮ
ಬೆಳ್ತಂಗಡಿ, ಆಗಸ್ಟ್ 19: ಶ್ರೀ ಧರ್ಮಸ್ಥಳ ಸೇವಾ ನಡ ಗ್ರಾಮದ ವಿಪತ್ತು ನಿರ್ವಹಣೆ ಘಟಕದ ಸ್ವಯಂಸೇವಕರಿಂದ ಹಿರಿಯ ಪ್ರಾಥಮಿಕ ಶಾಲೆ ಮಂಜೊಟ್ಟಿಯಲ್ಲಿ ಗಿಡ ನಾಟಿ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಅಜಿತ್ ಆರಿಗ ಅವರು ದೀಪ ಬೆಳಗಿಸುವ ಹಾಗೂ ಶಾಲೆಯ ಮುಖ್ಯ ಶಿಕ್ಷಕರಿಗೆ ಗಿಡ ವಿತರಿಸುವ ಮೂಲಕ ಉದ್ಘಾಟನೆ ನೆರವೇರಿಸಿದರು. ನಂತರ ಮಾತನಾಡಿ ಶ್ರೀ ಧರ್ಮಸ್ಥಳ ಸೇವಾ ವಿಪತ್ತು ನಿರ್ವಹಣಾ ಘಟಕ ಬೆಳ್ತಂಗಡಿ ತಾಲೂಕಿನಲ್ಲಿ ಬಹಳ ಉತ್ತಮ ಸೇವಾಕಾರ್ಯವನ್ನು ನಡೆಸುತ್ತಿದೆ. ಕಿಂಡಿ ಅಣೆಕಟ್ಟು ಸ್ವಚ್ಛತೆಯಂತಹ ಕಾರ್ಯ ನಡೆಸಿ …
ಹೊಸ ಮದ್ಯದಂಗಡಿಗಳಿಗೆ ಪರವಾನಿಗೆ – ರಾಜ್ಯ ಜನಜಾಗೃತಿ ವೇದಿಕೆಯಿಂದ ಖಂಡನೆ
ಬೆಳ್ತಂಗಡಿ, ಸೆ.27: ರಾಜ್ಯದಲ್ಲಿ ಈಗಾಗಲೇ ಹತ್ತು ಸಾವಿರಕ್ಕೂ ಮೀರಿದ ಚಿಲ್ಲರೆ, ಬಾರ್, ಎಂಎಸ್ಎಲ್ ಮಳಿಗೆ, ಕ್ಲಬ್, ಸ್ಟಾರ್ ಹೊಟೇಲ್ಗಳಲ್ಲಿ ಲೈಸನ್ಸ್ ಇರುವ ಮಳಿಗೆಗಳ ಮೂಲಕ ಮದ್ಯ ಮಾರಾಟ ನಡೆಯುತ್ತದೆ. ಇದಲ್ಲದೆ ಬಹುತೇಕ ಅಂಗಡಿ ಮುಗ್ಗಟ್ಟುಗಳಲ್ಲಿ ಮದ್ಯ ಮಾರಾಟ ವ್ಯಾಪಕವಾಗಿ ನಡೆಯುತ್ತಿದೆ. ಯಾವುದೇ ಪರವಾನಿಗೆ ಇಲ್ಲದೆ ಮದ್ಯಮಾರಾಟ ಮಾಡುವವರು ನಿರಾತಂಕವಾಗಿ ಈ ಕೆಲಸದಲ್ಲಿ ತೊಡಗಿಸಿಕೊಂಡಿದ್ದು, ರಾಜ್ಯದಲ್ಲಿ ಅಬಕಾರಿ ಇಲಾಖೆಯವರು ಮದ್ಯ ಮಾರಾಟ ಮಾಡುವ ಏಜೆಂಟರಂತೆ ಕೆಲಸ ನಿರ್ವಹಿಸುತ್ತಿರುವುದು ಗಮನಿಸಲಾಗಿದೆ. ಇತ್ತೀಚೆಗೆ ಮಾಧ್ಯಮದಲ್ಲಿ ಬಂದ ಮಾಹಿತಿಯಂತೆ ರಾಜ್ಯದಲ್ಲಿ ಮತ್ತೆ ವೈನ್ಶಾಪ್ಗಳಿಗೆ ಪರವಾನಿಗೆ ನೀಡಲು ತಯಾರಿ ನಡೆಯುತ್ತಿದ್ದು, ಅಬಕಾರಿ …






