ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ದಕ್ಷಿಣ ಕನ್ನಡ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯು ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸೌಧದಲ್ಲಿ ಮೇ 20 ಬುಧವಾರ ಜರಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜನಜಾಗೃತಿ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ ವಹಿಸಿದ್ದರು.ಕಾರ್ಯಕ್ರಮವನ್ನು ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ಎ ಸಿ ಭಂಡಾರಿ ಉದ್ಘಾಟಿಸಿದರು.ಜನಜಾಗೃತಿ ವೇದಿಕೆಯ ನೂತನ ಜಿಲ್ಲಾ ಸಂಘಟನಾ ಅಧ್ಯಕ್ಷರಾಗಿ ರೊಟೇರಿಯನ್ ಪ್ರಕಾಶ್ ಕಾರಂತ್ ನರಿಕೊಂಬು ಅವಿರೋಧವಾಗಿ ಆಯ್ಕೆಯಾದರು.ಜನಜಾಗೃತಿ ವೇದಿಕೆಯ ರಾಜ್ಯ ಕಾರ್ಯದರ್ಶಿ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್ ಜನಜಾಗೃತಿ ವೇದಿಕೆಯ …
ಹಿರೇಕೆರೂರು ತಾಲೂಕಿನಲ್ಲಿ ನಡೆ ಯಲಿರುವ ಮಧ್ಯವರ್ಜನ ಶಿಬಿರದ ಸಲುವಾಗಿನ ಸಮಾಲೋಚನಾ ಸಭೆಯಲ್ಲಿ ವ್ಯವಸ್ಥಾಪನಾ ಸಮಿತಿಯ ಉದ್ಘಾಟನೆ
ಹಾವೇರಿ ಜಿಲ್ಲೆ ಹಿರೇಕೆರೂರು ತಾಲ್ಲೂಕು ಹಿರೇ ಕಬ್ಬಾರ ವಲಯದಲ್ಲಿ ಮಧ್ಯವರ್ಜನ ಶಿಬಿರದ ಸಲುವಾಗಿ ಪೂರ್ವಭಾವಿ ಸಭೆಯನ್ನು ಆಯೋಜನೆ ಮಾಡಿದ್ದು ಈ ಸಭೆಯಲ್ಲಿ ಜಿಲ್ಲಾ ನಿರ್ದೇಶಕರಾದ ಶಿವರಾಯ ಪ್ರಭು ರವರು ಪ್ರಾಸ್ತಾವಿಕ ಮಾತುಗಳ ನಾಡಿ ಶಿಬಿರದ ಉದ್ದೇಶ ಮತ್ತು ರೂಪು ರೇಷಗಳ ಬಗ್ಗೆ ಮಾಹಿತಿ ನೀಡಿದರು. ಬಳಿಕ ವ್ಯವಸ್ಥಾಪನ ಸಮಿತಿಯ ರಚನೆಯನ್ನು ಮಾಡಿ ಸಮಿತಿಯ ಉದ್ಘಾಟನೆಯನ್ನು ನೆರವೇರಿಸಲಾಯಿತು. ಸಮಿತಿಯ ಗೌರವ ಅಧ್ಯಕ್ಷರಾಗಿ ಕರಿಬಸನಗೌಡ ಪಾಟೀಲ್, ಅಧ್ಯಕ್ಷರಾಗಿ ಶಿವಾನಂದಪ್ಪ ಹಾಗೂ ಉಪಾಧ್ಯಕ್ಷರಾಗಿ ರವೀಂದ್ರ, ಮಹಮ್ಮದ್, ಹಾಗೂ ಗೌರವ ಸಲಹೆಗಾರರಾಗಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರು ಹಾಗೂ ಸಾಹಿತಿಗಳಾದ …
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗೌರವಾನ್ವಿತ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಾದ ಶ್ರೀ ಅನಿಲ್ ಕುಮಾರ್ ಎಸ್.ಎಸ್ ಸರ್ ರವರಿಂದ ಮಾರ್ಗದರ್ಶನ
“ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SSಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ರಿ ಸಕಲೇಶಪುರ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆ, 2054ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಸಕಲೇಶಪುರ ಇದರ ವತಿಯಿಂದ ನಡೆಯುತ್ತಿರುವ ಮದ್ಯವರ್ಜನ ಶಿಬಿರದ ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನಿಲ್ ಕುಮಾರ್ ಎಸ್ ಎಸ್ ರವರು ಭಾಗವಹಿಸಿ ಶಿಬಿರಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.ಮಾನವ ಜೀವನವು ಪ್ರಕೃತಿಯ ಅದ್ಭುತ ಸೃಷ್ಟಿಗಳಲ್ಲೊಂದು. ಗಿಡದಲ್ಲಿ ಬಾಡುವ …
2054ನೇ ಮದ್ಯವರ್ಜನ ಶಿಬಿರ ಉದ್ಘಾಟನಾ ಸಮಾರಂಭ
ಸಕಲೇಶಪುರ : ಮದ್ಯವರ್ಜನ ಶಿಬಿರ ಉದ್ಘಾಟನಾ ಸಮಾರಂಭ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾII ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ, 2054ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಕಸಬಾ ವಲಯ ಇವರ ಆಶ್ರಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸಕಲೇಶಪುರ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಹಾಸನ ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು …
2055 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭ
ಪೂಜ್ಯ ಖಾವಂದರಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರ ದಿವ್ಯ ಮಾರ್ಗದರ್ಶನದಲ್ಲಿ ಸಮಾಜವನ್ನು ವ್ಯಸನಮುಕ್ತಗೊಳಿಸುವ ಮಹತ್ಕಾರ್ಯ ನಿರಂತರವಾಗಿ ಸಾಗುತ್ತಿದೆ ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿಯ ಯೋಜನಾಧಿಕಾರಿಗಳಾದ ಶ್ರೀ ಭಾಸ್ಕರ್ ಎನ್. ಅವರು ಹೇಳಿದರು.ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ, ಬೆಳ್ತಂಗಡಿ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ 2055 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಅವರು …
ಧಾರವಾಡ ಇದರ 2026- 27 ನೇ ಸಾಲಿನ ಪ್ರಥಮ ಮಾಸಿಕ ಸಭೆ
ಧಾರವಾಡ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ ) ಸಭೆ ಪ್ರಥಮ ತ್ರೈಮಾಸಿಕ ಸಭೆ ಇಂದು ಧಾರವಾಡ ಜಿಲ್ಲಾ ಕಚೇರಿಯಲ್ಲಿ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ರಿಜಿಸ್ಟರ್ ಧಾರವಾಡ ಇದರ 2026- 27 ನೇ ಸಾಲಿನ ಪ್ರಥಮ ಮಾಸಿಕ ಸಭೆ ನಡೆಯಿತು. ಸಭೆಯನ್ನು ಧಾರವಾಡ ಪ್ರಾದೇಶಿಕ ನಿರ್ದೇಶಕರಾದ ಶ್ರೀಮತಿ ದಯಾಶೀಲ ಮೇಡಂ & ಜಿಲ್ಲಾಧ್ಯಕ್ಷರಾದ ವಸಂತ ಅರ್ಕಾಚಾರಿ ಹಾಗೂ ಜಿಲ್ಲಾ ನಿರ್ದೇಶಕರು ಮತ್ತು ಪದಾಧಿಕಾರಿಗಳು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು ಪ್ರಾದೇಶಿಕ ನಿರ್ದೇಶಕರಾದ ಸುಮತಿ ದಯಶೀಲ ಮೇಡಂ ರವರು ಪ್ರಾದೇಶಿಕ ವ್ಯಾಪ್ತಿಯಲ್ಲಿ …
ಹಾವೇರಿ ಜಿಲ್ಲಾ ಜನಜಾಗೃತಿ ವೇದಿಕೆಯ 2026/2027 ನೇ ಸಾಲಿನ ಪ್ರಥಮ ತ್ರೈಮಾಸಿಕ ಸಭೆ
ಹಾವೇರಿ ಜಿಲ್ಲಾ ಜನಜಾಗೃತಿ ವೇದಿಕೆಯ ಟ್ರಸ್ಟ್ ರಿಜಿಸ್ಟರ್ ನ ಪ್ರಥಮ ಸಭೆ ಇಂದು ಯೋಜ ನೆಯ ಜಿಲ್ಲಾ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧ್ಯಕ್ಷರಾದ ಬಸವರಾಜ ಹುಲ್ಲತ್ತಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಹಿಂದಿನ ಸಭೆಯ ವರದಿ ಮಂಡನೆಯನ್ನು ಜಿಲ್ಲಾ ಕಾರ್ಯದರ್ಶಿ ಶಿವರಾಯ ಪ್ರಭು ರವರು ಮಂಡಿಸಿದರು.ಕಳೆದ ವರ್ಷದ ಜನಜಾಗೃತಿಯ ಜಿಲ್ಲಾ ಮಟ್ಟದ ಸಾಧನೆ ಹಾಗೂ ವರದಿ ವರ್ಷದ ಗುರಿ ಗಳ ಬಗ್ಗೆ ವಿಶೇಷ ರೀತಿಯ ಚರ್ಚೆ ನಡೆಯಿತು.ಮದ್ಯ ವರ್ಜನ ಶಿಬಿರಗಳ ಆಯೋಜನೆ.ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ ಧೂಮಪಾನ ವಿರೋಧಿ ದಿನಾಚರಣೆ & ಮಾದಕ ವಸ್ತುಗಳ ವಿರೋಧಿ ದಿನಾಚರಣೆಯ …
ಜನಜಾಗೃತಿ ವೇದಿಕೆ; ತಾಲೂಕು ಸಂಘಟನಾ ಅಧ್ಯಕ್ಷರಾಗಿ ವೇಣೂರು ಗಿರೀಶ್ ಕೆ.ಎಸ್. ಅವಿರೋಧ ಆಯ್ಕೆ
ಬೆಳ್ತಂಗಡಿ; ತಾಲೂಕು ಜನಜಾಗೃತಿ ವೇದಿಕೆಯ ಸರ್ವ ಸದಸ್ಯರ ವಿಶೇಷ ಸಭೆಯು ಎಸ್.ಡಿ.ಎಂ ಕಲಾಭವನದ ಪಿನಾಕಿ ಸಭಾಂಗಣದಲ್ಲಿ ಏ.21 ರಂದು ಜರುಗಿತು. ಸಭಾಧ್ಯಕ್ಷತೆಯನ್ನು ತಾ. ಸಮಿತಿ ಅಧ್ಯಕ್ಷ ಎಂ.ಎ ಕಾಸಿಂ ಮಲ್ಲಿಗೆಮನೆ ವಹಿಸಿದ್ದರು.ವ್ಯಸನಮುಕ್ತ ಸಮಾಜ ನಿರ್ಮಾಣದ ಸವಾಲಿನ ಸಂಕಲ್ಪದೊಂದಿಗೆ ಮುನ್ನಡೆಯುತ್ತಿರುವ ವೇದಿಕೆಯ ಕಾರ್ಯಕ್ರಮಗಳಿಗೆ ಶಕ್ತಿ ತುಂಬುವ ಉದ್ದೇಶದೊಂದಿಗೆ ವರದಿ ಸಾಲಿನಲ್ಲಿ ತಾಲೂಕಿನ ಗರ್ಡಾಡಿಯಲ್ಲಿ ಮದ್ಯವರ್ಜನ ಶಿಬಿರ ಆಯೋಜಿಸುವ ಬಗ್ಗೆ ನಿರ್ಧರಿಸಲಾಯಿತು. ಇದೇ ವೇಳೆ ವಿದ್ಯಾರ್ಥಿ ಮತ್ತು ಯುವ ಸಮೂಹವನ್ನು ಗುರಿಯಾಗಿಸಿ ತಾಲೂಕಿನ ವಿವಿಧ ಶಾಲಾ ಕಾಲೇಜುಗಳಲ್ಲಿ ಒಟ್ಟು 40 ಕಡೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳನ್ನು ಸಂಯೋಜಿಸುವುದೆಂದು …
ಅಜ್ಜಂಪುರ : ಮದ್ಯವರ್ಜನ ಶಿಬಿರ ಉದ್ಘಾಟನಾ ಸಮಾರಂಭ
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾII ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ, 2049ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಜ್ಜಂಪುರ ವಲಯ ಇವರ ಆಶ್ರಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಅಜ್ಜಂಪುರ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಚಿಕ್ಕಮಗಳೂರು ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ ಇದರ ವಿಸ್ತರಣಾ …
ರಾಯಭಾಗ ತಾಲೂಕು ರಾಯಭಾಗ, ಕಂಕಣವಾಡಿ ವಲಯಗಳ ನವಜೀವನೋತ್ಸವ & ಉಚಿತ ಕಣ್ಣಿನ ಆರೋಗ್ಯ ತಪಾಸಣೆ ಕಾರ್ಯಕ್ರಮ
ರಾಯಭಾಗ ತಾಲೂಕು ರಾಯಭಾಗ,ಕಂಕಣವಾಡಿ ವಲಯಗಳ ನವಜೀವನೋತ್ಸವ & ಉಚಿತ ಕಣ್ಣಿನ ಆರೋಗ್ಯ ತಪಾಸಣೆ ಕಾರ್ಯಕ್ರಮ ನಡೆಯಿತು ಕಾರ್ಯಕ್ರಮವನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷರು ಶ್ರೀ ಜಿನೇಂದ್ರ ಖೇಮಲಾಪುರೆ ಸರ್ ರವರು ಉದ್ಘಾಟಿಸಿ, ಮಾತನಾಡಿ ಪೂಜ್ಯರ ಸಮಾಜಕ್ಕೆ ನೀಡುತ್ತಿರುವ ಸೇವೆಯನ್ನು ಸ್ಮರಿಸಿಕೊಂಡರು.ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಆದರ್ಶ ಆಸ್ಪತ್ರೆಯ ವೈದ್ಯಾಧಿಕಾರಿ ಶ್ರೀ ದಯಾನಂದ ಕೋರೆ ಮಾತನಾಡಿ ನವಜೀವನ ಎಂದರೆ ಹಿಂದಿನ ಕುಡಿತದ ಕಹಿ ಘಳಿಗೆಗಳನ್ನು ಮರೆತು ಧನಾತ್ಮಕ ಚಿಂತನೆಯೊಂದಿಗೆ ಹೊಸ ಬದುಕನ್ನು ಹೊಸ ಉತ್ಸಾಹದೊಂದಿಗೆ ಬದುಕುವುದೇ ನವಜೀವನ ಎಂದರು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಧಾರವಾಡ ಪ್ರಾದೇಶಿಕ ವ್ಯಾಪ್ತಿಯ ಜನಜಾಗೃತಿ …








