ಬೆಟ್ಟಗೇರಿ ಉದಯ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಮಡಿಕೇರಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಕೊಡಗು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬೆಟ್ಟಗೇರಿ ವಲಯ ಮತ್ತು ಉದಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಬೆಟ್ಟಗೇರಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಪರಮಪೂಜ್ಯ ರಾಜರ್ಷಿ ಡಾll ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಡಾll ಹೇಮಾವತಿ ವಿ.ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಸ್ವಸ್ಥ ಮತ್ತು ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಈ ವಿಷಯ …
ತುಮಕೂರು ಜನಜಾಗೃತಿಯ ವೇದಿಕೆಯ ತ್ರೈಮಾಸಿಕ ಸಭೆ
ತುಮಕೂರು -2 ಜಿಲ್ಲೆಯ ಜಿಲ್ಲಾ ಜನಜಾಗೃತಿಯ ವೇದಿಕೆಯ ತ್ರೈಮಾಸಿಕ ಸಭೆಯು ಜಿಲ್ಲಾ ಜನಜಾಗೃತಿ ವೇದಿಕೆಯ ಜಿಲ್ಲಾ ಅಧ್ಯಕ್ಷರಾದ ಶ್ರೀ ಮಂಜುನಾಥ ಲಾಲ್ ಪೇಟೆ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯನ್ನು ನಿಕಟಪೂರ್ವ ಅಧ್ಯಕ್ಷ ರಾದ ಶ್ರೀ ರಾಮಚಂದ್ರ ಗುಪ್ತರವರು ಉದ್ಘಾಟಿಸಿ ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಪೂಜ್ಯರ ವಿರುದ್ಧದ ಷಡ್ಯಂತ್ರ ಮಾಡುವವರ ಬಗ್ಗೆ ಖಂಡನಾ ನಿರ್ಣಯ ಕೈಗೊಳ್ಳಲಾಯಿತು. ಈ ಸಭೆಯಲ್ಲಿ ಜನಜಾಗೃತಿಯ ಸದಸ್ಯರು, ಗಣ್ಯರು ಭಾಗವಹಿಸಿದರು. ಈ ಸಭೆಯಲ್ಲಿ ಗತಸಭೆಯ ವರದಿಯನ್ನು ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀ ಪ್ರವೀಣ್ …
1964 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ರಿಜಿಸ್ಟರ್ ಆಲೂರು ತಾಲೂಕು, ಶ್ರೀ ವೀರಶೈವ ಸಮುದಾಯ ಭವನದಲ್ಲಿ ನಡೆಯುತ್ತಿರುವ 1964 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಶ್ರೀ ನವೀನ್ ಚಂದ್ರ ಶೆಟ್ಟಿ ಅಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು,ಶ್ರೀ ಮಲ್ಲಿಕಾರ್ಜುನ್ ತಹಶೀಲ್ದಾರರು ಆಲೂರು ತಾಲೂಕು ಗೌರವಾನ್ವಿತರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು,ಜನಜಾಗೃತಿ ಮೈಸೂರು ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿಗಳು ಮುಖೇಶ್ ರವರು ಪ್ರಸ್ತಾವಿಕವಾಗಿ ಶಿಬಿರದ ಬಗ್ಗೆ ವಿಚಾರವನ್ನು ತಿಳಿಸಿದರು,ಮುಖ್ಯ ಅತಿಥಿಯ ನೆಲೆಯಲ್ಲಿ ಜಿಲ್ಲಾ ನಿರ್ದೇಶಕರಾದ ಸುರೇಶ್ ಮೊಯ್ಲಿ ಯವರು ಕಾರ್ಯಕ್ರಮದ …
1942ನೇ ಮದ್ಯವರ್ಜನ ಶಿಬಿರದ ನವಜೀವನ ಸಮಿತಿ ಸದಸ್ಯರ ಪ್ರಥಮ ಮಾಸಿಕ ಸಭೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ಚಿಕ್ಕನಾಯಕನಹಳ್ಳಿ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ತುಮಕೂರು-2 ಜಿಲ್ಲೆ ರವರ ಸಹಯೋಗದೊಂದಿಗೆ ಶ್ರೀ ಲಕ್ಷ್ಮೀರಂಗನಾಥಸ್ವಾಮಿ ದೇವಾಲಯ ಸಾದರಹಳ್ಳಿಯಲ್ಲಿ 1942ನೇ ಮದ್ಯವರ್ಜನ ಶಿಬಿರದ ನವಜೀವನ ಸಮಿತಿ ಸದಸ್ಯರ ಪ್ರಥಮ ಮಾಸಿಕ ಸಭೆಯನ್ನು ನಡೆಸಲಾಯಿತು.ಪ್ರಥಮ ಮಾಸಿಕ ಸಭೆಯನ್ನು ವೇದಿಕೆಯಲ್ಲಿ ಉಪಸ್ಥಿತರಿದ್ದ ಅಥಿತಿಗಳು ದೀಪ ಪ್ರಜ್ವಲನೆಯನ್ನು ಮಾಡುವ ಮೂಲಕ ಉದ್ಗಾಟನೆ ಮಾಡಿದರು.ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನು ಬೆಂಗಳೂರು ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆ ಯೋಜನಾಧಿಕಾರಿಗಳಾದ ಶ್ರೀ ತಿಮ್ಮಯ್ಯನಾಯ್ಕ ಸರ್ ರವರು ಶಿಬಿರಾರ್ಥಿಗಳು ಮತ್ತು …
ಜನಜಾಗೃತಿ ವೇದಿಕೆಯ ತಾಲೂಕು ಪದಾಧಿಕಾರಿಗಳ ಸಭೆಯು ಇಂದು ಪುತ್ತೂರು ಯೋಜನಾ ಕಚೇರಿಯ ಸಭಾಂಗಣದಲ್ಲಿ ತಾಲೂಕು ಅಧ್ಯಕ್ಷರಾದ ಲೋಕೇಶ್ ಹೆಗ್ಡೆ ಅಧ್ಯಕ್ಷತೆಯಲ್ಲಿ ನಡೆಯಿತು
ಎಸ್ಐಟಿ ತನಿಖೆಗೆ ಸ್ವಾಗತಿಸುತ್ತೇವೆ…. ಆದರೆ ಕ್ಷೇತ್ರದ ವಿರುದ್ಧ ನಡೆಯುತ್ತಿರುವ ವ್ಯವಸ್ಥಿತ ಅಪಪ್ರಚಾರಕ್ಕೆ ಜನಜಾಗೃತಿ ಪುತ್ತೂರು ತಾಲೂಕು ವೇದಿಕೆಯಿಂದ ತೀವ್ರ ಖಂಡನೆ*ವ್ಯಕ್ತಪಡಿಸಿದೆ ಜನಜಾಗೃತಿ ವೇದಿಕೆಯ ತಾಲೂಕು ಪದಾಧಿಕಾರಿಗಳ ಸಭೆಯು ಇಂದು ಪುತ್ತೂರು ಯೋಜನಾ ಕಚೇರಿಯ ಸಭಾಂಗಣದಲ್ಲಿ ತಾಲೂಕು ಅಧ್ಯಕ್ಷರಾದ ಲೋಕೇಶ್ ಹೆಗ್ಡೆ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾಧ್ಯಕ್ಷರಾದ ಪದ್ಮನಾಭ ಶೆಟ್ಟಿ ಸಭೆಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಅಲ್ಲಿನ ಧರ್ಮಾಧಿಕಾರಿಗಳು ಸಮಾಜದಲ್ಲಿ ನೊಂದವರ ಕಣ್ಣೆರಿಸುವಂತಹ ಪುಣ್ಯದ ಕೆಲಸವನ್ನು ಮಾಡುತ್ತಿದ್ದಾರೆ. ಇಂಥವರ ವಿರುದ್ಧ ವ್ಯವಸ್ಥಿತ ಷಡ್ಯಂತ್ರದ ಮೂಲಕ ಅಪಪ್ರಚಾರ ಮಾಡುತ್ತಿರುವುದು ನಮ್ಮೆಲ್ಲರಿಗೂ ನೋವನ್ನು …









