ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ
ಹೊಸಹಳ್ಳಿ ತಾಲೂಕಿನ ಕೆರೆ ಗೋಡು ವಲಯದ ಶ್ರೀ ಮಾಧವ ವಿದ್ಯಾಲಯದ ಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ನಡೆಸಲಾಯಿತು ಜನ ಜಾಗೃತಿ ಸದಸ್ಯರಾದ ಶ್ರೀ ಮಹದೇವ್ ಕಾರಸ ವಾಡಿ, ಶಾಲೆಯ ಕೋಶಾಧಿಕಾರಿ ಶ್ರೀ ರವಿ, ಕಾರ್ಯದರ್ಶಿ ಯಾದ ಶ್ರೀ ಕುಮಾರ್, ಒಕ್ಕೂಟದ ಅಧ್ಯಕ್ಷರಾದ ಸುಮಿತ್ರ ಭಾಗವಹಿಸಿದ್ದರು ಸದಸ್ಯರಾದ ಶ್ರೀ ಮಹದೇವು ಕಾರಸ ವಾಡಿ ರವರು ಮಕ್ಕಳಿಗೆ ದುಶ್ಚಟ ದಿಂದ ಆಗುವ ಸಮಸ್ಯೆ ಗಳು, ಸ್ವಸ್ಥ ಸಮಾಜ ನಿರ್ಮಾಣ ಮಾಡುವಲ್ಲಿ ಮಕ್ಕಳ ಪಾತ್ರ, ಜನ ಜಾಗೃತಿ ಕಾರ್ಯಕ್ರಮ ಗಳ ಬಗ್ಗೆ ಮಾಹಿತಿ ನೀಡಿದರು 🙏🙏
1943ನೇ ಮದ್ಯವರ್ಜನ ಶಿಬಿರದ ಸಮಾರೋಪ
ಹಾಸನ ಜಿಲ್ಲೆಯ ಬಾಣಾವರದ 1943ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶ್ರೀ ಶ್ರೀ ಶ್ರೀ ಜಯಚಂದ್ರಶೇಖರ ಸ್ವಾಮಿಯವರು, ಕೇದಿಗೆ ಮಠ, ಕೋಳಗುಂದ ಇವರಿಂದ ಶುಭಾಶೀರ್ವಾದ
ನಶೆ ಮುಕ್ತ ಭಾರತ
ಸರಕಾರಿ ಪಾಲಿಟೆಕ್ನಿಕ್ ಕಾಲೇಜು, ಕಾರ್ಕಳ ಇಲ್ಲಿನ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಇಂದು ನಡೆಯಿತು. “ನಶೆ ಮುಕ್ತ ಭಾರತ ” ಎನ್ನುವ ವಿಷಯವಾಗಿ ಜನಜಾಗೃತಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿ. ಪಾಯ್ಸ್ ರವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಕಾಲೇಜು ಪ್ರಾಂಶುಪಾಲರಾದ ಶ್ರೀಯುತ ಕುಮಾರ್ ಮತ್ತು ಕಾಲೇಜು ಪ್ರಾಧ್ಯಾಪಕರು ಉಪಸ್ಥಿತರಿದ್ದರು. ಸುಮಾರು 200 ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಾಮನಗರ ತಾಲ್ಲೂಕು,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಿ ಇ ಎನ್ ಪೊಲೀಸ್ ಠಾಣೆ ರಾಮನಗರ ಸಹಯೋಗದಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆ ಹುಣಸೆದೊಡ್ಡಿಯಲ್ಲಿ ನಡೆಸಲಾಯಿತು.ಕಾರ್ಯಕ್ರಮ ಉದ್ಘಾಟನೆಯನ್ನು ಸವಿತಾ ಪಿ ಆರ್. ಹಿರಿಯ ಸಿವಿಲ್ ನ್ಯಾಯಾದೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಾಡಿದರು. ದುಶ್ಚಟ ಮುಕ್ತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ, ಮಾದಕ ವಸ್ತು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಮತ್ತು ಕಾನೂನಿನಲ್ಲಿ ಶಿಕ್ಷೆಯ ಪ್ರಮಾಣ ಬಗ್ಗೆ …
1947ನೇ ಶಿಬಿರದ ಉದ್ಘಾಟನಾ ಕಾರ್ಯಕ್ರಮ
ಸವದತ್ತಿ ತಾಲೂಕಿನಲ್ಲಿ ದಿನಾಂಕ : 08.07.2025 ರಿಂದ 15.07.2025 ರವರೆಗೆ ನಡೆಯುವ 1947ನೇ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಉದ್ಘಾಟಕರಾಗಿ ಆಗಮಿಸಿದ ರಾಜಕೀಯ ಧುರೀಣರಾದ ಶ್ರೀ ವಿರೂಪಾಕ್ಷಪ್ಪ ಮಾವನಿಯವರು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅಧ್ಯಕ್ಷತೆಯನ್ನು ಜಿಲ್ಲಾ ಜನ ಜಾಗೃತಿ ವೇದಿಕೆ ಅಧ್ಯಕ್ಷರಾದ ಶ್ರೀ ಸುಭಾಷ್ ಹನಸಿ ವಹಿಸಿದ್ದರು. ಕಾರ್ಯಕ್ರಮದಲ್ಲಿ PSI ಶ್ರೀ ಕಲ್ಮೇಶ್ ಬನ್ನೂರು, THO ಶ್ರೀ ಶ್ರೀಪಾದ್ ಸಬನಿಸ್, ವ್ಯವಸ್ಥಾಪನಾ ಸಮಿತಿ ಗೌರವಾಧ್ಯಕ್ಷರಾದ ಶ್ರೀ ಪಂಚನಗೌಡ ದ್ಯಾಮನಗೌಡರ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಪ್ರವೀಣ ಪಟ್ಟಣಶೆಟ್ಟಿ, ವ್ಯವಸ್ಥಾಪನಾ ಸಮಿತಿ ಉಪಾಧ್ಯಕ್ಷರಾದ ಶ್ರೀಮತಿ …
251 ನೇ ವಿಶೇಷ ಮಧ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನ ಕೇಂದ್ರ ಲಾಯಿಲ ಜಾಗೃತಿ ಸೌಧದಲ್ಲಿ ನಡೆದ 251 ನೇ ವಿಶೇಷ ಮಧ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಇಂದು ನೆರವೇರಿತು,ಜನ ಜಾಗೃತಿಯ ಪ್ರಾದೇಶಿಕ ನಿರ್ದೇಶಕರಾದ ಗೌರವಾನ್ವಿತ ವಿವೇಕ್ ವಿನ್ಸೆಂಟ್ ಪಾಯಸ್ ರವರು ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾಹಿತಿ ನೀಡುತ್ತಾ ಜನಜಾಗೃತಿ ವೇದಿಕೆ ಬೆಳೆದುಕೊಂಡು ಬಂದ ಹಾದಿ ಹಾಗೂ ಈ ಮಧ್ಯವರ್ಜನ ಶಿಬಿರದ ವ್ಯವಸ್ಥೆಯ ಬಗ್ಗೆ, ಮಧ್ಯಪಾನದಿಂದ ಆಗುವ ಅನಾಹುತದ ಕುರಿತು ಒಬ್ಬ ವ್ಯಕ್ತಿಯ ಮೇಲೆ ವ್ಯಸನದಿಂದ ಉಂಟಾಗುವ ಪರಿಣಾಮ,ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯರು ಮಾಡುತ್ತಿರುವ ಸಮಾಜ ಸೇವೆ …









