ಶ್ರೀ ಹೆಚ್. ಎಸ್ ನಾಗೇಶ್ ರವರು ರಾಜ್ಯಾಧ್ಯಕ್ಷರು ಕರ್ನಾಟಕ ಛಾಯಾ ಚಿತ್ರ ಗ್ರಾಹಕರ ಸಂಘ (ರಿ) ಬೆಂಗಳೂರು, ಅಧ್ಯಕ್ಷರು ಸಂಸ್ಕೃತಿ ಟ್ರಸ್ಟ್ (ರಿ) ದೊಡ್ಡಬಳ್ಳಾಪುರ, ಮಾಜಿ ಕಾರ್ಯದರ್ಶಿ ದಕ್ಷಿಣ ಭಾರತ ಪೋಟೋ ಮತ್ತು ವಿಡಿಯೋ ಗ್ರಾಫ್ ಅಸೋಷಿಯೇಷನ್ ಚನೖ, ನಿರ್ದೇಶಕರು ಬೀರೇಶ್ವರ ಕೋ ಆಪರೇಟೀವ್ ಸೊಸೖಟಿ ದೊಡ್ಡಬಳ್ಳಾಪುರ ಸಂಘಟನೆಗಳಲ್ಲಿ ಸಕ್ರಿಯವಾಗಿದ್ದು ಪ್ರಸ್ತುತ ಎರಡು ವರ್ಷಗಳ ಅವಧಿಗೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ)ಬೆಂಗಳೂರು ಗ್ರಾಮಾಂತರ ಜಿಲ್ಲೆ ಗೆ ನೂತನವಾಗಿ ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆ ಗೊಂಡಿರುತ್ತಾರೆ.
ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಧರ್ಮಸ್ಥಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ ಇದರ ಸಹಭಾಗಿತ್ವದಲ್ಲಿ ಪರಮಪೂಜ್ಯ ಡಾII ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ,ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ “ಜಾಗೃತಿಸೌಧ” ದಲ್ಲಿ 256ನೇ ವಿಶೇಷ ಮದ್ಯವರ್ಜನ ಶಿಬಿರ ( 1981ನೇ ರಾಜ್ಯ ಮಟ್ಟದ ಶಿಬಿರ ) ಉದ್ಘಾಟನೆಗೊಂಡಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಶಿಬಿರದ ವೈದ್ಯಾಧಿಕಾರಿ ಹಾಗೂ ಆರ್ಯಭಟ ಪ್ರಶಸ್ತಿ ಪುರಸ್ಕೃತ ವೈದ್ಯರಾದ ಡಾl ಶ್ರೀ ಮೋಹನದಾಸ …
ಜಮಖಂಡಿ ತಾಲೂಕಿನ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ
ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿ ಭಾಷಣ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಗೌರವಾನ್ವಿತ ರಾಜ್ಯ ಸಂಘಟನಾ ಅಧ್ಯಕ್ಷರಾದ ಶ್ರೀ ನಟರಾಜ ಬಾದಾಮಿ ಸರ್ ರವರಿಂದ.
1974ನೇ ಶಿಬಿರದ ಸಮಾರೋಪ ಸಮಾರಂಭ
ಮಂಡ್ಯ ಜಿಲ್ಲೆಯ ಇತಿಹಾಸ ಪ್ರಸಿದ್ಧ ಮೇಲುಕೋಟೆ ಶ್ರೀ ಚೆಲುವನಾರಾಯಣ ಸ್ವಾಮಿ ಸನ್ನಿಧಿಯಲ್ಲಿ ಶ್ರೀ ಆದಿಚುಂಚನಗಿರಿ ಮಠದ ಸಭಾಭವನದಲ್ಲಿ ನಡೆದ 1974ನೇ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮೇಲುಕೋಟೆ ಶ್ರೀ ಯೋಗನರಸಿಂಹ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ನಾರಾಯಣ ಭಟ್ಟರು ಭಾಗವಹಿಸಿ ಶಿಬಿರಾರ್ಥಿಗಳಿಗೆ ಆಶೀರ್ವಚನ ಮಾಡಿದರು.
ತುಮಕೂರು-1 ಜಿಲ್ಲಾ ಜನಜಾಗೃತಿ ವೇದಿಕೆ ಪದಾದಿಕಾರಿಗಳ ಸಭೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ತುಮಕೂರು-1 ಜಿಲ್ಲೆ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ತುಮಕೂರು-1 ಜಿಲ್ಲೆ ಸಹಯೋಗದೊಂದಿಗೆ ರಾಜರ್ಷಿ ಪದ್ಮಭೂಷಣ ಡಾ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾ. ಹೇಮಾವತಿ ವಿ. ಹೆಗ್ಗಡೆಯವರ ಕೃಪಾಷೀರ್ವಾದ ಹಾಗೂ ಮಾರ್ಗ ದರ್ಶನಗಳೊಂದಿಗೆ ತುಮಕೂರು-1 ಜಿಲ್ಲಾ ಜನಜಾಗೃತಿ ವೇದಿಕೆ ಪದಾದಿಕಾರಿಗಳ ಸಭೆಯನ್ನು ತುಮಕೂರು ಯೋಜನಾಕಛೇರಿ ಸಭಾಂಗಣದಲ್ಲಿ ನಡೆಸಲಾಯಿತು.ತುಮಕೂರು ಗ್ರಾಮಾಂತರ ಯೋಜನಾ ಕಛೇರಿಯ ಯೋಜನಾಧಿಕಾರಿಗಳಾದ ಶ್ರೀ ಸಂದೇಶ್ ರವರು ಕಾರ್ಯ ಕ್ರಮದಲ್ಲಿ ಭಾಗವಹಿಸಿದ ಸರ್ವರಿಗೂ ಸ್ವಾಗತವನ್ನು ಬಯಸಿದರು. ವೇದಿಕೆಯಲ್ಲಿ …
1974ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ
ಮೈಸೂರು ಪ್ರಾದೇಶಿಕ ವ್ಯಾಪ್ತಿಯ ಕೆ. ಆರ್. ನಗರ ಜಿಲ್ಲೆಯ ಮೇಲುಕೋಟೆ ಯೋಜನಾ ವ್ಯಾಪ್ತಿಯಲ್ಲಿ 1974ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ಗೌರವಾನ್ವಿತ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ಸರ್ ರವರಿಂದ 42 ಶಿಬಿರಾರ್ಥಿಗಳಿಗೆ ಹಾಗೂ ಅವರ ಕುಟುಂಬ ಸದಸ್ಯರಿಗೆ ಮಾಹಿತಿ-ಮಾರ್ಗದರ್ಶನ
1974ನೇ ಮದ್ಯವರ್ಜನ ಶಿಬಿರದ 8ನೇ ದಿನದ ಕುಟುಂಬದ ದಿನ ಕಾರ್ಯಕ್ರಮ
ಮೈಸೂರು ಪ್ರಾದೇಶಿಕ ವಿಭಾಗದ ಕೆ ಆರ್ ನಗರ ಜಿಲ್ಲಾ ವ್ಯಾಪ್ತಿಯ ಮೇಲುಕೋಟೆ 1974ನೇ ಮದ್ಯವರ್ಜನ ಶಿಬಿರದ 8ನೇ ದಿನದ ಕುಟುಂಬದ ದಿನ ಕಾರ್ಯಕ್ರಮವನ್ನು ಪ್ರಾದೇಶಿಕ ನಿರ್ದೇಶಕರು ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ಸರ್ ಅವರು ನಡೆಸಿಕೊಟ್ಟರು… ಯೋಜನಾಧಿಕಾರಿಯವರು ಶ್ರೀ ಮಾಧವ ಗೌಡ ಶ್ರೀ ಮುಖೇಶ್ ಶ್ರೀಮತಿ ಸರೋಜ ಇನ್ನಿತರರು ಉಪಸ್ಥಿತಿ ಇದ್ದರು.
ನವಜೀವನ ಸಮಿತಿ ಸದಸ್ಯರ ನವಜೀವನೋತ್ಸವ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ಚಿಕ್ಕನಾಯಕನಹಳ್ಳಿ ತಾಲೂಕುಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ತುಮಕೂರು-2 ಜಿಲ್ಲೆ ರವರ ಸಹಯೋಗದೊಂದಿಗೆ ಶ್ರೀ ಲಕ್ಷ್ಮೀ ರಂಗನಾಥ ಸ್ವಾಮಿ ಕಲ್ಯಾಣಮಂಟಪ ಸಾದರಹಳ್ಳಿ ಯಲ್ಲಿ ಚಿಕ್ಕನಾಯಕನಹಳ್ಳಿ ತಾಲೂಕಿನ ಪಾನಮುಕ್ತ ನವಜೀವನ ಸಮಿತಿ ಸದಸ್ಯರ ನವಜೀವನೋತ್ಸವ ಕಾರ್ಯಕ್ರಮವನ್ನು ನಡೆಸಲಾಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿದ ಸರ್ವರನ್ನು ಚಿಕ್ಕನಾಯಕನಹಳ್ಳಿ ಯೋಜನಾಕಛೇರಿಯ ಯೋಜನಾಧಿಕಾರಿಗಳಾದ ಶ್ರೀ ಪ್ರೇಮಾನಂದ್ ರವರು ಸ್ವಾಗತಿಸಿದರು.ಕಾರ್ಯಕ್ರಮದ ವೇದಿಕೆಯಲ್ಲಿ ಉಪಸ್ಥಿತರಿದ್ದ ಅಥಿತಿಗಳು ದೀಪ ಪ್ರಜ್ವಲನೆಯನ್ನು ಮಾಡುವ ಮೂಲಕ ಉದ್ಗಾಟನೆ ಮಾಡಿದರು.ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನು ಬೆಂಗಳೂರು ಪ್ರಾದೇಶಿಕ ವಿಭಾಗದ …
ಸ್ವಾಸ್ಥ್ಯಸಂಕಲ್ಪ ತರಬೇತುದಾರರ ತರಬೇತಿ ಕಾರ್ಯಗಾರ
ಕೆ. ಆರ್. ನಗರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೆ.ಆರ್. ನಗರ ಜಿಲ್ಲಾ ವ್ಯಾಪ್ತಿಯ ಸ್ವಾಸ್ಥ್ಯಸಂಕಲ್ಪ ತರಬೇತುದಾರರ ತರಬೇತಿ ಕಾರ್ಯಗಾರದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವಿಭಾಗದ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ಸರ್ ರವರು ತರಬೇತಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ನಿರ್ದೇಶಕರಾದ ಗೌರವಾನ್ವಿತ ಶ್ರೀಮತಿ ಮಮತಾ ರಾವ್ ಮೇಡಂರವರು ಉಪಸ್ಥಿತರಿದ್ದರು.








