ಚನ್ನರಾಯಪಟ್ಟಣ:ಸಮಾಜದ ಪಿಡುಗಾದ ಮದ್ಯ ವ್ಯಸನದಿಂದ ನೊಂದ ಕುಟುಂಬಗಳಿಗೆ ಆಶಾಕಿರಣವಾಗಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ) ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ 2103 ನೇ ಮದ್ಯ ವರ್ಜನ ಶಿಬಿರದ ಉದ್ಘಾಟನಾ ಸಮಾರಂಭವು ಅರ್ಥಪೂರ್ಣವಾಗಿ ಹಾಗೂ ಅತ್ಯಂತ ಯಶಸ್ವಿಯಾಗಿ ಜರುಗಿತು. ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಡಾ. ಹೇಮಾವತಿ ವಿ. ಹೆಗ್ಗಡೆಯವರ ದಿವ್ಯ ಕೃಪಾಶೀರ್ವಾದದೊಂದಿಗೆ ನಡೆದ ಈ ಕಾರ್ಯಕ್ರಮವು, ವ್ಯಸನಮುಕ್ತ ಸಮಾಜ ನಿರ್ಮಾಣದತ್ತ ಧರ್ಮಸ್ಥಳ ಸಂಸ್ಥೆಯ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಕಾರ್ಯಕ್ರಮದ ಪ್ರಮುಖ ಮುಖ್ಯಾಂಶಗಳು: …
ಮಿಶ್ರಿಕೋಟಿ ಮದ್ಯವರ್ಜನ ಶಿಬಿರ ಉದ್ಘಾಟನಾ ಸಮಾರಂಭ
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾII ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ.ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ, 2097ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಮಿಶ್ರಿಕೋಟಿ ಇವರ ಆಶ್ರಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಕಲಘಟಗಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಧಾರವಾಡ ಜಿಲ್ಲೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಮಾರ್ಗದರ್ಶನದೊಂದಿಗೆ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕಲಘಟಗಿ …
2076ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ
ಬಂಟ್ವಾಳ: ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ವಾಮದಪದವು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಇತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಡೆಯುತ್ತಿರುವ 2076ನೇ ಮದ್ಯವರ್ಜನ ಶಿಬಿರದ ಕೊನೆಯ ದಿನದಲ್ಲಿ ಕುಟುಂಬ ದಿನ ಕಾರ್ಯಕ್ರಮವನ್ನು ಶ್ರೀ ವಿವೇಕ್ ವಿ ಪಾಯಸ್ ಜನಜಾಗೃತಿ ವಿಭಾಗದ ಪ್ರಾದೇಶಿಕ ನಿರ್ದೇಶಕರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮದ್ಯಪಾನವನ್ನು ತ್ಯಜಿಸುವುದು ಎಂದರೆ ಕೇವಲ ಒಂದು ಕೆಟ್ಟ ಅಭ್ಯಾಸವನ್ನು ಬಿಡುವುದಲ್ಲ; ಅದು ಕುಟುಂಬದ ಮೇಲಿನ ಪ್ರೀತಿ, ಜವಾಬ್ದಾರಿ ಮತ್ತು ಕಾಳಜಿಯನ್ನು ವ್ಯಕ್ತಪಡಿಸುವ ಮಹತ್ವದ ನಿರ್ಧಾರವಾಗಿದೆ. ಮದ್ಯವಿಲ್ಲದ ಮನೆಯಲ್ಲಿ ಪ್ರೀತಿ ಹೆಚ್ಚುತ್ತದೆ, …
ಮದ್ಯಪಾನ ಆತಂಕ ಮತ್ತು ಖಿನ್ನತೆಯನ್ನು ಉಂಟುಮಾಡುವ ಪಾನೀಯ- “ಡಾ. ಡಿ. ವೀರೇಂದ್ರ ಹೆಗ್ಗಡೆ”
ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರದಲ್ಲಿ ನಡೆದ 272ನೇ ವಿಶೇಷ ಮದ್ಯವರ್ಜನ ಶಿಬಿರದ 78 ಮಂದಿ ಶಿಬಿರಾರ್ಥಿಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಾರ್ಗದರ್ಶನ ನೀಡುತ್ತಾ ಮದ್ಯಪಾನ ಒಳ್ಳೆಯದಲ್ಲ ಇದು ಮನುಷ್ಯನ ಪಂಚೇಂದ್ರಿಯಗಳಿಗೆ ತೊಡಕನ್ನು ಉಂಟುಮಾಡುತ್ತದೆ.ಮನುಷ್ಯನಿಗೆ ಕೆಟ್ಟ ವಸ್ತುಗಳ ಮೇಲೆ ಆಕರ್ಷಣೆ ಜಾಸ್ತಿ ಕೆಟ್ಟ ಅಭ್ಯಾಸಗಳು ಸುಲಭವಾಗಿ ಅಂಟಿಕೊಳ್ಳುತ್ತದೆ ಆದರೆ ಅದನ್ನು ಬಿಡ ಬೇಕಾದರೆ ಕಷ್ಟ ಪಡಬೇಕಾಗುತ್ತದೆ ಕುಡಿತದಿಂದ ಆರೋಗ್ಯ ಹಾಳಾಗುವುದರೊಂದಿಗೆ ಮನುಷ್ಯನ ಆಯುಷ್ಯ ಕಡಿಮೆಯಾಗುತ್ತದೆ . ದುಶ್ಚಟದಿಂದ ದೂರವಿದ್ದಾಗ ಸಂಸಾರದಲ್ಲಿ ಹಾಗೂ ಸಮಾಜದಲ್ಲಿ ಒಬ್ಬ ವ್ಯಕ್ತಿ ಗೌರವಯುತವಾಗಿ …
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ದಕ್ಷಿಣ ಕನ್ನಡ ಜಿಲ್ಲಾ ಜನಜಾಗೃತಿ ಸಭೆ. ನೂತನ ಜಿಲ್ಲಾ ಸಂಘಟನಾ ಅಧ್ಯಕ್ಷರಾಗಿ ಪ್ರಕಾಶ್ ಕಾರಂತ್ ನರಿಕೊಂಬು ಆಯ್ಕೆ
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ದಕ್ಷಿಣ ಕನ್ನಡ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯು ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸೌಧದಲ್ಲಿ ಮೇ 20 ಬುಧವಾರ ಜರಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜನಜಾಗೃತಿ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ ವಹಿಸಿದ್ದರು.ಕಾರ್ಯಕ್ರಮವನ್ನು ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ಎ ಸಿ ಭಂಡಾರಿ ಉದ್ಘಾಟಿಸಿದರು.ಜನಜಾಗೃತಿ ವೇದಿಕೆಯ ನೂತನ ಜಿಲ್ಲಾ ಸಂಘಟನಾ ಅಧ್ಯಕ್ಷರಾಗಿ ರೊಟೇರಿಯನ್ ಪ್ರಕಾಶ್ ಕಾರಂತ್ ನರಿಕೊಂಬು ಅವಿರೋಧವಾಗಿ ಆಯ್ಕೆಯಾದರು.ಜನಜಾಗೃತಿ ವೇದಿಕೆಯ ರಾಜ್ಯ ಕಾರ್ಯದರ್ಶಿ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್ ಜನಜಾಗೃತಿ ವೇದಿಕೆಯ …
ಹಿರೇಕೆರೂರು ತಾಲೂಕಿನಲ್ಲಿ ನಡೆ ಯಲಿರುವ ಮಧ್ಯವರ್ಜನ ಶಿಬಿರದ ಸಲುವಾಗಿನ ಸಮಾಲೋಚನಾ ಸಭೆಯಲ್ಲಿ ವ್ಯವಸ್ಥಾಪನಾ ಸಮಿತಿಯ ಉದ್ಘಾಟನೆ
ಹಾವೇರಿ ಜಿಲ್ಲೆ ಹಿರೇಕೆರೂರು ತಾಲ್ಲೂಕು ಹಿರೇ ಕಬ್ಬಾರ ವಲಯದಲ್ಲಿ ಮಧ್ಯವರ್ಜನ ಶಿಬಿರದ ಸಲುವಾಗಿ ಪೂರ್ವಭಾವಿ ಸಭೆಯನ್ನು ಆಯೋಜನೆ ಮಾಡಿದ್ದು ಈ ಸಭೆಯಲ್ಲಿ ಜಿಲ್ಲಾ ನಿರ್ದೇಶಕರಾದ ಶಿವರಾಯ ಪ್ರಭು ರವರು ಪ್ರಾಸ್ತಾವಿಕ ಮಾತುಗಳ ನಾಡಿ ಶಿಬಿರದ ಉದ್ದೇಶ ಮತ್ತು ರೂಪು ರೇಷಗಳ ಬಗ್ಗೆ ಮಾಹಿತಿ ನೀಡಿದರು. ಬಳಿಕ ವ್ಯವಸ್ಥಾಪನ ಸಮಿತಿಯ ರಚನೆಯನ್ನು ಮಾಡಿ ಸಮಿತಿಯ ಉದ್ಘಾಟನೆಯನ್ನು ನೆರವೇರಿಸಲಾಯಿತು. ಸಮಿತಿಯ ಗೌರವ ಅಧ್ಯಕ್ಷರಾಗಿ ಕರಿಬಸನಗೌಡ ಪಾಟೀಲ್, ಅಧ್ಯಕ್ಷರಾಗಿ ಶಿವಾನಂದಪ್ಪ ಹಾಗೂ ಉಪಾಧ್ಯಕ್ಷರಾಗಿ ರವೀಂದ್ರ, ಮಹಮ್ಮದ್, ಹಾಗೂ ಗೌರವ ಸಲಹೆಗಾರರಾಗಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರು ಹಾಗೂ ಸಾಹಿತಿಗಳಾದ …
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗೌರವಾನ್ವಿತ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಾದ ಶ್ರೀ ಅನಿಲ್ ಕುಮಾರ್ ಎಸ್.ಎಸ್ ಸರ್ ರವರಿಂದ ಮಾರ್ಗದರ್ಶನ
“ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SSಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ರಿ ಸಕಲೇಶಪುರ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆ, 2054ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಸಕಲೇಶಪುರ ಇದರ ವತಿಯಿಂದ ನಡೆಯುತ್ತಿರುವ ಮದ್ಯವರ್ಜನ ಶಿಬಿರದ ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನಿಲ್ ಕುಮಾರ್ ಎಸ್ ಎಸ್ ರವರು ಭಾಗವಹಿಸಿ ಶಿಬಿರಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.ಮಾನವ ಜೀವನವು ಪ್ರಕೃತಿಯ ಅದ್ಭುತ ಸೃಷ್ಟಿಗಳಲ್ಲೊಂದು. ಗಿಡದಲ್ಲಿ ಬಾಡುವ …
2054ನೇ ಮದ್ಯವರ್ಜನ ಶಿಬಿರ ಉದ್ಘಾಟನಾ ಸಮಾರಂಭ
ಸಕಲೇಶಪುರ : ಮದ್ಯವರ್ಜನ ಶಿಬಿರ ಉದ್ಘಾಟನಾ ಸಮಾರಂಭ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾII ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ, 2054ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಕಸಬಾ ವಲಯ ಇವರ ಆಶ್ರಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸಕಲೇಶಪುರ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಹಾಸನ ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು …
2055 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭ
ಪೂಜ್ಯ ಖಾವಂದರಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರ ದಿವ್ಯ ಮಾರ್ಗದರ್ಶನದಲ್ಲಿ ಸಮಾಜವನ್ನು ವ್ಯಸನಮುಕ್ತಗೊಳಿಸುವ ಮಹತ್ಕಾರ್ಯ ನಿರಂತರವಾಗಿ ಸಾಗುತ್ತಿದೆ ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿಯ ಯೋಜನಾಧಿಕಾರಿಗಳಾದ ಶ್ರೀ ಭಾಸ್ಕರ್ ಎನ್. ಅವರು ಹೇಳಿದರು.ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ, ಬೆಳ್ತಂಗಡಿ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ 2055 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಅವರು …
ಧಾರವಾಡ ಇದರ 2026- 27 ನೇ ಸಾಲಿನ ಪ್ರಥಮ ಮಾಸಿಕ ಸಭೆ
ಧಾರವಾಡ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ ) ಸಭೆ ಪ್ರಥಮ ತ್ರೈಮಾಸಿಕ ಸಭೆ ಇಂದು ಧಾರವಾಡ ಜಿಲ್ಲಾ ಕಚೇರಿಯಲ್ಲಿ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ರಿಜಿಸ್ಟರ್ ಧಾರವಾಡ ಇದರ 2026- 27 ನೇ ಸಾಲಿನ ಪ್ರಥಮ ಮಾಸಿಕ ಸಭೆ ನಡೆಯಿತು. ಸಭೆಯನ್ನು ಧಾರವಾಡ ಪ್ರಾದೇಶಿಕ ನಿರ್ದೇಶಕರಾದ ಶ್ರೀಮತಿ ದಯಾಶೀಲ ಮೇಡಂ & ಜಿಲ್ಲಾಧ್ಯಕ್ಷರಾದ ವಸಂತ ಅರ್ಕಾಚಾರಿ ಹಾಗೂ ಜಿಲ್ಲಾ ನಿರ್ದೇಶಕರು ಮತ್ತು ಪದಾಧಿಕಾರಿಗಳು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು ಪ್ರಾದೇಶಿಕ ನಿರ್ದೇಶಕರಾದ ಸುಮತಿ ದಯಶೀಲ ಮೇಡಂ ರವರು ಪ್ರಾದೇಶಿಕ ವ್ಯಾಪ್ತಿಯಲ್ಲಿ …








